ಹಳಿಯಾಳ: ಇಲ್ಲಿನ ಹಳಿಯಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಲಕ್ಷಾಮವಿದೆ ಎಂದು ಅಧಿಕಾರಿಗಳು ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಪರಿಶೀಲನಾ ಸಭೆಗೆ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಆರ್.ವಿ. ದೇಶಪಾಂಡೆ, ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಾಲೂಕು ಪಂಚಾಯತ್ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಪಿಡಿಒಗಳು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಎಂದರು.
ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಬೇಸಿಗೆಯ ಸಮಯದಲ್ಲಿ ಆದಷ್ಟು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಪರಿಶೀಲಿಸಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು.ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಯದಿದ್ದಲ್ಲಿ ಅವುಗಳನ್ನು ನನ್ನ ಗಮನಕ್ಕೆ ತರಬೇಕು. ಜನರ ಸಮಸ್ಯೆಗಳ ಪರಿಹರಿಸಲು ಆದಷ್ಟು ಶಾಶ್ವತ ಯೋಜನೆಗಳನ್ನು ರೂಪಿಸಲು ಮುಂದಾಗಬೇಕು ಎಂದರು.
ಬಹುಗ್ರಾಮ ನೀರಿನ ಯೋಜನೆಯು ಮುಕ್ತಾಯದ ಹಂತಕ್ಕೆ ತಲುಪಿದ್ದು, ಏಪ್ರಿಲ್ 15ರೊಳಗಾಗಿ 71 ಗ್ರಾಮಗಳಿಗೆ ಪ್ರಾಯೋಗಿಕವಾಗಿ ನೀರು ಪೂರೈಕೆಯನ್ನು ಆರಂಭಿಸಲಿದ್ದೇವೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಭಾರಿ ವಿಳಂಬವಾಗಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ದೇಶಪಾಂಡೆ, ಜನಜೀವನ ಮಿಷನ್ ಕಾಮಗಾರಿಯು ಸರಿಯಾಗಿ ನಡೆಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಅಂತರ್ಜಜಲ ಕುಸಿತ:
ಮಾಹಿತಿ ನಾಲಿಗೆಯ ತುದಿಯಲ್ಲಿರಲಿ:
ಸಭೆಯಲ್ಲಿ ಹಳಿಯಾಳ ತಹಸೀಲ್ದಾರ ಪ್ರವೀಣ ಹುಚ್ಚಣ್ಣನವರ, ದಾಂಡೇಲಿ ತಹಸೀಲ್ದಾರ ಶೈಲೇಶ್ ಪರಮಾನಂದ, ಜೋಯಿಡಾ ತಹಸೀಲ್ದಾರ ಮಂಜುನಾತ ಮುನವಳ್ಳಿ ಹಾಗೂ ಇತರ ಅಧಿಕಾರಿಗಳು ಮತ್ತು ಪಿಡಿಒಗಳು ಇದ್ದರು.