ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ.
ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಬಗ್ಗೆ ಕನ್ನಡಪ್ರಭ ಅ. 23ರಂದು "ಹಂಪಿಯಲ್ಲಿ ಧೂಳಿನ ಸಿಂಚನ! " ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಸ್ಪಂದಿಸಿದ ಹಂಪಿ ಅಭಿವೃದ್ಧಿ ಪ್ರಾಧಿಕಾರ ಈಗ ಹಂಪಿ ರಸ್ತೆಯಲ್ಲಿ ಟ್ಯಾಂಕರ್ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.