.ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು: ರೈತರ ವಿರೋಧ

KannadaprabhaNewsNetwork |  
Published : Jan 17, 2025, 12:46 AM IST
ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಪ್ರದೇಶಗಳಿಗ ಹಿಡಕಲ್‌ ಜಲಾಶಯ ನೀರು ಬಿಡುಗಡೆಗೆ ವಿರೋಧಿಸಿ ರೈತರು ಪ್ರತಿಭಟನೆ ಮಾಡಿದರು | Kannada Prabha

ಸಾರಾಂಶ

ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಭಟನೆ ಮಾಡಿದರು.

ಯಾವುದೇ ಕಾರಣಕ್ಕೂ ಹುಬ್ಬಳ್ಳಿ- ಧಾರವಾಡ ಕೈಗಾರಿಕಾ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಜಿಲ್ಲಾಧಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಹಿಡಕಲ್ ಜಲಾಶಯದಿಂದ ನೀರನ್ನು ಹುಬ್ಬಳ್ಳಿ-ಧಾರವಾಡಕ್ಕೆ ಕೈಗಾರಿಕಾ ಉದ್ದೇಶಕ್ಕಾಗಿ ನೀರನ್ನು ಒಯ್ಯುತ್ತಿದ್ದು, ಈ ಭಾಗದ

ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಹತ್ತಾರು ತಾಲೂಕುಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗುತ್ತದೆ. ಅದಕ್ಕೆ ಸಾಕಷ್ಟು ಬಾರಿ

ಹೋರಾಟ ಕೂಡಾ ಮಾಡಿದ್ದು ನಮ್ಮ ಭಾಗದ ಜನರಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ಯಾವುದೇ ಕಾರಣಕ್ಕೂ ಈ ಕೈಗಾರಿಕೆಗಳಿಗೆ

ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು ಹೇಳಿದರು.

ಪೈಪ್ ಲೈನ್ ಹಾಕಲಿಕ್ಕೆ ಯಾವ ರೈತರು ಕೂಡಾ ಅವಕಾಶ ಕೊಡುವುದಿಲ್ಲ. ರಾಜ್ಯ ಸರ್ಕಾರ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ , ತಾಲೂಕು ಅಧಿಕಾರಿಗಳು ತಕ್ಷಣವೇ ಈ ಕಾಮಗಾರಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಬರುವ ದಿನಮಾನಗಳಲ್ಲಿ ಕರ್ನಾಟಕದ ರಾಜ್ಯಾದ್ಯಂತ

ರೈತ ಸಂಘಟನೆ ಹಸಿರು ಸೇನೆ ಸಾವಿರಾರು ಸಂಖ್ಯೆಯಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಚೂನಪ್ಪ ಪೂಜಾರಿ ಸಂಜು ಹೂವನ್ನವರ್ ಕಿಶನ್ ನಂದಿ ಜಗದೀಶ್‌ ದೇವರೆಡ್ಡಿ ಮೊದಲಾದ ರೈತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!