ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಕೃಷಿಕ ಸಮಾಜ ಹಾಗೂ ಆಕಾಶವಾಣಿ ಮೈಸೂರು ಸಹಯೋಗದಲ್ಲಿ ಆಯೋಜಿಸಿದ್ದ ರೈತ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಯಾವುದೇ ಒಂದು ಕೃಷಿ ಕುಟುಂಬ ರೈತ ಮಹಿಳೆ ಇಲ್ಲದೆ ತನ್ನ ಸಂಪೂರ್ಣ ಕೃಷಿ ಬದುಕನ್ನು ನಡೆಸಲು ಸಾಧ್ಯವಿಲ್ಲ. ಕೃಷಿಯ ಬೆನ್ನೆಲುಬು ಮಹಿಳೆಯು ಇದ್ದಾರೆ ಎಂದರು.
ಕೃಷಿಕರೇ ಆಗಿರುವ ಕುಟುಂಬದವರು ಕೂಡಾ ಒಬ್ಬ ವಿದ್ಯಾವಂತ ರೈತ ಮಗನಿಗೆ ತಮ್ಮ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದರೆ ನಾವೆಲ್ಲಾ ಎಂತಹ ಸಂದಿಗ್ಧತೆಯಲ್ಲಿದ್ದೇವೆ ಎಂದು ಅರ್ಥಮಾಡಿಕೊಳ್ಳಬೇಕು. ಇಂತಹ ದಿನಗಳಲ್ಲಿ ನಾವು ಅತ್ಮಕ್ಕೆ ವಂಚನೆ ಮಾಡಿಕೊಂಡು ಸಂಭ್ರಮ ಪಡುವ ಪರಿಸ್ಥಿತಿಯಲ್ಲಿ ನಾವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ನಾವೆಲ್ಲರೂ ಕೂಡಾ ಕೇವಲ ಆಚರಣೆಗಳಲ್ಲಿ ಕಾಲ ಕಳೆಯುತ್ತಿದ್ದೇವೆ. ರೈತನು ಇಂದಿನ ಪರಿಸ್ಥಿತಿಯಲ್ಲಿ ಇರುವ ಭೂಮಿಯನ್ನು ಕಳೆದುಕೊಂಡರೆ ಮತ್ತೆ ಭೂ ಮಾಲೀಕನಾಗಲು ಸಾಧ್ಯವಿಲ್ಲ. ಆದ್ದರಿಂದ ಯಾರೊಬ್ಬರು ಕೂಡಾ ಇರುವ ನಿಮ್ಮ ಪೂರ್ವಿಕರ ಜಮೀನನ್ನು ಮಾರಾಟ ಮಾಡದೆ ಉಳಿಸಿಕೊಂಡು ಕೃಷಿ ಬದುಕಿಗೆ ಅರ್ಥವನ್ನು ಕೊಡಿ ಎಂದು ಕಿವಿಮಾತು ಹೇಳಿದರು.
ಪ್ರತಿ ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಪಂಚೇಂದ್ರೀಯಗಳೇ ಇಲ್ಲದ ದಪ್ಪ ಚರ್ಮದ ಈ ಸರಕಾರಗಳಿಗೆ ರೈತರ ಕಷ್ಟ ಅರ್ಥವಾಗುತ್ತಿಲ್ಲ. ವಿಶ್ವಕ್ಕೆ ಅನ್ನ ಕೊಡುವ ರೈತನ ದಿನಾಚರಣೆಯನ್ನು ಸರಕಾರಗಳು ರಾಷ್ಟ್ರೀಯ ಹಬ್ಬವನ್ನಾಗಿ ಆಚರಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಕೃಷಿಗೆ ಸಾಕಷ್ಟು ಅನುದಾನ ಕೊಡಲಾಗುತ್ತಿದೆ. ಆದರೆ, ಆ ಅನುದಾನ ಎಲ್ಲಿ ಹೋಗುತ್ತಿದೆ ಎಂಬುದನ್ನು ಹುಡುಕಬೇಕಾಗಿದೆ. ಇಂದು ಬಂಡವಾಳಶಾಹಿಗಳು ರೈತನಾಗುವ ಯುವ ಪೀಳಿಗೆಯನ್ನು ಟೀಕಿಸುತ್ತಿದ್ದಾರೆ. ಇದರಿಂದ ಹೆಣ್ಣು ಕೊಡಲು ಯಾರು ಮುಂದೆ ಬರುತ್ತಿಲ್ಲ. ಇದನ್ನು ಅರ್ಥಮಾಡಿಕೊಂಡು ಮುಂದಿನ ದಿನಗಳಲ್ಲಿ ಜಾಗೃತಿ ಮೂಡಿಸಲು ಸಂಕಲ್ಪ ಮಾಡಿದ್ದೇವೆ ಎಂದರು.
ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಕೇಶವಮೂರ್ತಿ ರೈತರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ನಾಟನಹಳ್ಳಿ ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆರ್ಟಿಓ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ತಾಪಂ ಮಾಜಿ ಸದಸ್ಯರಾದ ಜಾನಕಿರಾಂ, ಹೆತ್ತಗೋನಹಳ್ಳಿ ನಾರಾಯಣಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಎಸ್.ಎಲ್.ಮೋಹನ್, ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕ ರಘು, ಕರವೇ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ವೇಣು, ಪದವೀಧರ ಘಟಕದ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್, ಪ್ರಗತಿಪರ ಮಹಿಳಾ ರೈತ ಮುಖಂಡರಾದ ಪ್ರಮೀಳಾ ವರದರಾಜೇಗೌಡ, ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಸೇರಿದಂತೆ ಸಾವಿರಾರು ರೈತರು ಉಪಸ್ಥಿತರಿದ್ದರು.