ಉತ್ತಮ ಸಂಸ್ಕಾರಗಳಿಂದ ಮಕ್ಕಳನ್ನು ವಂಚಿಸುತ್ತಿದ್ದೇವೆ

KannadaprabhaNewsNetwork |  
Published : Nov 27, 2023, 01:15 AM IST
ಫೋಟೋ ೨೬ ವಾಯೆಲ್ಪಿ ೦೧ | Kannada Prabha

ಸಾರಾಂಶ

ರಾಮಾಯಣದ ಕುರಿತು ಸಾಕಷ್ಟು ಪುಸ್ತಕಗಳು ಬರೆಯಲ್ಪಟ್ಟಿದೆ. ಮೂಲ ವಾಲ್ಮೀಕಿ ಬರೆದ ಕಥೆಗೂ, ತದನಂತರ ಬಂದ ಬರಹಗಾರರ ಕಥೆಗೂ ಭಿನ್ನತೆ ಕಾಣಬಹುದು. ಅನೇಕರು ರಾಮನ ವ್ಯಕ್ತಿತ್ವವನ್ನ ಆಕ್ಷೇಪಿಸಿದ್ದಾರೆ. ಹಾಗಂತ ಲಕ್ಷ್ಮಣನನ್ನು ವಿಶೆಷವಾಗಿ ಪರಿಗಣಿಸಲೇ ಇಲ್ಲ ಎಂದು ಉಮ್ಮಚಗಿ ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ.ಜಿ. ಭಟ್ ಸಂಕದಗುಂಡಿ ಹೇಳಿದರು. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಭಾಭವನದಲ್ಲಿ ಆಯೋಜಿಸಿದ್ದ `ನಾ ಕಂಡಂತೆ ಲಕ್ಷ್ಮಣ'' ರಾಜ್ಯಮಟ್ಟದ ಮಕ್ಕಳ ಘೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಯಲ್ಲಾಪುರ: ರಾಮಾಯಣದ ಕುರಿತು ಸಾಕಷ್ಟು ಪುಸ್ತಕಗಳು ಬರೆಯಲ್ಪಟ್ಟಿದೆ. ಮೂಲ ವಾಲ್ಮೀಕಿ ಬರೆದ ಕಥೆಗೂ, ತದನಂತರ ಬಂದ ಬರಹಗಾರರ ಕಥೆಗೂ ಭಿನ್ನತೆ ಕಾಣಬಹುದು. ಅನೇಕರು ರಾಮನ ವ್ಯಕ್ತಿತ್ವವನ್ನ ಆಕ್ಷೇಪಿಸಿದ್ದಾರೆ. ಹಾಗಂತ ಲಕ್ಷ್ಮಣನನ್ನು ವಿಶೇಷವಾಗಿ ಪರಿಗಣಿಸಲೇ ಇಲ್ಲ ಎಂದು ಉಮ್ಮಚಗಿ ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ.ಜಿ. ಭಟ್ ಸಂಕದಗುಂಡಿ ಹೇಳಿದರು.

ಭಾನುವಾರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ, ಮಕ್ಕಳ ಪ್ರಕಾರ, ಉಮ್ಮಚಗಿಯ ಶ್ರೀಮಾತ ವೈದಿಕ ಶಿಕ್ಷಣ ಸಂಸ್ಥೆ ಮತ್ತು ಉಮ್ಮಚಗಿ ವ್ಯ.ಸೇ.ಸ. ಸಂಘ ಹಮ್ಮಿಕೊಂಡಿದ್ದ `ನಾ ಕಂಡಂತೆ ಲಕ್ಷ್ಮಣ'''' ರಾಜ್ಯಮಟ್ಟದ ಮಕ್ಕಳ ಘೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯಮಟ್ಟದಲ್ಲಿ ಅಭಾಸಾಪ ಇಂತಹ ಘೋಷ್ಠಿ ಹಮ್ಮಿಕೊಂಡಿರುವುದರಿಂದ ಮಕ್ಕಳಿಗೆ ರಾಮಾಯಣದ ಕುರಿತು ಅಭ್ಯಾಸ ಮಾಡುವುದಕ್ಕೆ ಅವಕಾಶ ಲಭಿಸಿದೆ. ನಾವು ಚಿಕ್ಕಂದಿನಲ್ಲಿ ನಮ್ಮ ಹಿರಿಯರು ರಾಮಾಯಣ, ಭಾರತದ ಕಥೆ ಹೇಳುತ್ತಿದ್ದರು. ಇಂದು ಅಂತಹ ಉತ್ತಮ ಸಂಸ್ಕಾರಗಳಿಂದ ಮಕ್ಕಳನ್ನ ವಂಚಿಸುತ್ತಿದ್ದೇವೆ. ಈ ಕುರಿತು ಪಾಲಕರಾದ ನಾವು ಚಿಂತನೆ ಮಾಡಲೇಬೇಕಾದ ಕಾಲದಲ್ಲಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ಟ ಮಾತನಾಡಿ, ನಮಗೆ ಸ್ವಾತಂತ್ರ್ಯ ಬಂದ ಮೇಲೆಯೇ ನಮ್ಮ ಸಂಸ್ಕೃತಿಯ, ಪರಂಪರೆಯ ಮೇಲೆ ಆಕ್ರಮಣ ಪ್ರಾರಂಭವಾಯಿತು. ಆದರೆ ಈ ದೇಶದಲ್ಲಿ ಅಭಾಸಾಪ ಚಟುವಟಿಕೆ ಪ್ರಾರಂಭವಾದ ಮೇಲೆ ಆಕ್ರಮಣ ಕಡಿಮೆಯಾಗುತ್ತಿದೆ. ಆದರೂ ನಮ್ಮ ಸಮಾಜ ಮೌಲ್ಯದಿಂದ ದೂರವಾಗುತ್ತಿದೆ. ನಮ್ಮ ಸಂಸ್ಥೆಯ ಉದ್ದೇಶ ಭವಿಷ್ಯತ್ತಿನಲ್ಲಿ ಯುವ ಜನಾಂಗ ಸನ್ಮಾರ್ಗದಲ್ಲಿ ಸಾಗಬೇಕೆಂಬುದೇ ಆಗಿದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ಸಂಘಟಕಿ ಸುಜಾತಾ ಹೆಗಡೆ ಕಾಗಾರಕೊಡ್ಲು ಆಶಯ ಭಾಷಣ ಮಾಡಿ, ಜಗತ್ತಿನ ಅನೇಕ ರಾಷ್ಟ್ರಗಳು ಭಾರತೀಯ ಸಂಸ್ಕೃತಿಯನ್ನು ಗೌರವಿಸುತ್ತಿದೆ. ನಮ್ಮ ಮಕ್ಕಳಿಗೆ ರಾಷ್ಟ್ರೀಯತೆಯ ಅರಿವನ್ನು ಮೂಡಿಸಬೇಕು. ಸಮಷ್ಟಿಗೆ ತೊಡಕಾಗದ ಸಾಹಿತ್ಯ ಬರಬೇಕು. ರಾಮಾಯಣದಲ್ಲಿ ಲಕ್ಷ್ಮಣನ ಪಾತ್ರ ಆದರ್ಶ ಮತ್ತು ಆಪ್ತವಾಗಿದೆ. ನಮ್ಮ ವೇದಗಳು, ಪುರಾಣಗಳು, ಸಂಸ್ಕೃತಿಯನ್ನು ಗಟ್ಟಿಯಾಗಿ ಉಳಿಸಿಕೊಂಡು ಬಂದಿದೆ. ಆ ದೃಷ್ಟಿಯಿಂದ ನಮ್ಮ ನಾಡಿನ ಅನೇಕ ಜಿಲ್ಲೆಗಳಿಂದ ಬಂದ ಮಕ್ಕಳಿಗೆ ರಾಮಾಯಣದ ಕುರಿತು ತಮ್ಮ ಯೋಚನೆಗಳನ್ನ ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಶ್ರೀಮಾತಾ ವೈದಿಕ ಸಂಸ್ಕೃತ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಮಹೇಶ ಭಟ್ ಸ್ವಾಗತಿಸಿ, ನಿರ್ವಹಿಸಿ, ವಂದಿಸಿದರು. ಪ್ರೇರಣಾ ಭಟ್ಟ, ಸಿಂಧೂರಾ ಹೆಗಡೆ ಪ್ರಾರ್ಥಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸವದತ್ತಿಯ ಅಗಸ್ತ್ಯ ತಂಡಕ್ಕೆ ಬೈಲಹೊಂಗಲ ಚಾಂಪಿಯನ್ಸ್ ಟ್ರೋಫಿಬೈಲಹೊಂಗಲ ಬೈಲಹೊಂಗಲ ಚಾಂಪಿಯನ್ಸ್ ಟ್ರೋಫಿ–2026 ಸೀಜನ್-1
ಭಕ್ತರಿಗೆ ಸೋಮನಾಥ ಜ್ಯೋತಿರ್ಲಿಂಗದ ದರ್ಶನ