ನುಡಿದಂತೆ ನಡೆದಿದ್ದೇವೆ ನಮ್ಮ ಕೈ ಬಿಡಬೇಡಿ: ಶರತ್

KannadaprabhaNewsNetwork |  
Published : Dec 28, 2023, 01:45 AM IST
ಸೂಲಿಬೆಲೆ ಹೋಬಳಿ ಬುವನಹಳ್ಳಿ ಗ್ರಾಮದಲ್ಲಿ ಶಾಸಕ ಶರತ್ ಬಚ್ಚೇಗೌಡರು ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಹಿಳೆಯರೊಂದಿಗೆ ಸಮಾಲೋಚಿಸಿದರು,  ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ, ಬುವನಹಳ್ಳಿ ಗೋಪಾಲಪ್ಪ, ಹಸಿಗಾಳ ಜಗಧೀಶ್, ಮುತ್ಸಂದ್ರ ಆನಂದಪ್ಪ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಚುನಾವಣಾ ಪೂರ್ವ ನೀಡಿದ ಎಲ್ಲಾ ವಾಗ್ದಾನಗಳನ್ನು ನಾವು ಈಡೇರಿಸಿದ್ದೇವೆ ನುಡಿದಂತೆ ನೆಡೆದಿದ್ದೇವೆ ಎಂದಿಗೂ ನಮ್ಮನ್ನು ಕೈ ಬಿಡಬೇಡಿ ಎಂದು ಶಾಸಕ ಶರತ್ ಬಚ್ಚೇಗೌಡ ಕೋರಿದರು.

ಸೂಲಿಬೆಲೆ: ಚುನಾವಣಾ ಪೂರ್ವ ನೀಡಿದ ಎಲ್ಲಾ ವಾಗ್ದಾನಗಳನ್ನು ನಾವು ಈಡೇರಿಸಿದ್ದೇವೆ ನುಡಿದಂತೆ ನೆಡೆದಿದ್ದೇವೆ ಎಂದಿಗೂ ನಮ್ಮನ್ನು ಕೈ ಬಿಡಬೇಡಿ ಎಂದು ಶಾಸಕ ಶರತ್ ಬಚ್ಚೇಗೌಡ ಕೋರಿದರು.

ಹೋಬಳಿಯ ಭುವನಹಳ್ಳಿಯಲ್ಲಿ ಮನೆ ಮನೆಗೆ ತೆರಳಿ ಮಹಿಳೆಯರು ಮತ್ತು ಮಕ್ಕಳ ಜೊತೆ ಮಾತನಾಡಿದ ಅವರು, ಉಚಿತ ವಿದ್ಯುತ್ ನೀಡಿದ್ದೇವೆ. ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ 2 ಸಾವಿರ ಹಾಕಿದ್ದೇವೆ. ಬಸ್ ಪ್ರಯಾಣ ಉಚಿತ ನೀಡಿದ್ದೇವೆ, ಅನ್ನಭಾಗ್ಯದ ಹಣ ಖಾತೆಗೆ ಜಮಾ ಮಾಡಿದ್ದೇವೆ, ಜನರಿಂದ ಜನರಿಗಾಗಿ, ಜನರಿಗೋಸ್ಕರವೇ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜನಾದೇಶದಂತೆ ನಡೆಯುತ್ತದೆ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ನೋಂದಣಿಯಾಗದ ಫಲಾನುಭವಿಗಳು ಸ್ಥಳೀಯ ಗ್ರಾಮ ಪಂಚಾಯತ್‌ನಲ್ಲಿ 3 ದಿನಗಳ ಕಾಲ ಅವಕಾಶ ನೀಡಿದ್ದು, ಉಚಿತವಾಗಿ ಕೆವೈಸಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ, ತಾಪಂ ಮಾಜಿ ಸದಸ್ಯ ಡಾ.ಡಿ.ಟಿ.ವೆಂಕಟೇಶ್, ಬುವನಹಳ್ಳಿ ಗೋಪಾಲಪ್ಪ, ಹಸಿಗಾಳ ಜಗದೀಶ್, ಹಾಪ್‌ಕಾಮ್ಸ್ ನಿರ್ದೇಶಕ ಎಂ.ಬಿ.ವೆಂಕಟೇಶ್ ಇತರರಿದ್ದರು.ಚಿತ್ರ; ೨೭ ಎಸ್ ಎಲ್ ಬಿ ೧ ಜೆಪಿಜೆ ನಲ್ಲಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ