ಕನ್ನಡಪ್ರಭ ವಾರ್ತೆ ಗೋಕಾಕ
ನಗರದ ತಾಪಂ ಸಭಾ ಭವನದಲ್ಲಿ ಸೋಮವಾರ ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಘೀ ಜ್ವರ ಸದ್ದು ಮಾಡುತ್ತಿದ್ದು, ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳು ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಳೆಯ ಪ್ರಮಾಣ ಹೆಚ್ಚಿರುವುದರಿಂದ ಪ್ರವಾಹದ ಬಗ್ಗೆ ಮತ್ತು ರೋಗರುಜಿನಗಳು ಹರಡದಂತೆ ಕ್ರಮಕೈಗೊಳ್ಳಬೇಕು. ನಗರಸಭೆ ಪಟ್ಟಣ ಪಂಚಾಯತಿಗಳಲ್ಲಿ ಮನೆಗಳ ಉತಾರ ಪಡೆಯಲು ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಅಂತವರನ್ನು ಕೂಡಲೇ ಸಸ್ಪೆಂಡ್ ಮಾಡುವಂತೆ ಮೇಲಾಧಿಕಾರಿಗಳಿಗೆ ಸೂಚಿಸಿದರು.
ಸಿಬ್ಬಂದಿ ನೇಮಕಕ್ಕೆ ಪ್ರಯತ್ನ:
ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸರಿಯಾದ ಸಮಯಕ್ಕೆ ಕೃಷಿ, ತೋಟಗಾರಿಕೆ ಇಲಾಖೆಯಿಂದ ಸರ್ಕಾರಿ ಸೌಲಭ್ಯಗಳು ಸಿಗುವಂತಾಗಬೇಕು. ತಾಲೂಕಿನಲ್ಲಿ ರೈತರಿಗೆ ಕೃಷಿ ಇಲಾಖೆಯಿಂದ ಬರುವ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ. ಅಲ್ಲದೇ ಅದರ ಬಗ್ಗೆ ಪ್ರಚಾರ ಸಹ ಆಗುತ್ತಿಲ್ಲ. ಅಧಿಕಾರಿಗಳು ಯೋಜನೆಗಳನ್ನು ತಿಳಿಸಿ, ರೈತರು ಸದ್ಬಳಕೆಮಾಡಿಕೊಳ್ಳಲು ಸಹಕಾರ ನೀಡಬೇಕು. ಕೃಷಿ ಇಲಾಖೆಯಲ್ಲಿ ಕೃಷಿ ಪರಿಕರಗಳು ಅರ್ಹ ಫಲಾನುಭವಿಗಳಿಗೆ ಸೇರುತ್ತಿಲ್ಲ. ಕೃಷಿ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅಂತವರ ಬಗ್ಗೆ ಕ್ರಮಕೈಗೊಳ್ಳಲು ಹೇಳಿದರು.ಮಳೆಗಾಲವಾಗಿರುವುದರಿಂದ ಕಾಲುವೆಗಳ ಸ್ವಚ್ಛತೆಗೆ ಕ್ರಮವಹಿಸಿ, ರೈತರಿಗೆ ಕಾಲುವೆ ನೀರು ಸರಿಯಾಗಿ ತಲುಪಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಹೆಸ್ಕಾಂನಿಂದ ರೈತರಿಗೆ ವಿದ್ಯುತ್ ಕಂಬ, ಟಿಸಿ ಸೇರಿದಂತೆ ರೈತರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕೆಂದು ತಿಳಿಸಿದರು.ಸಭೆಯಲ್ಲಿ ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಉದಯ ಕಾಂಬಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.ಜನಸ್ನೇಹಿ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ. ಸ್ವತಃ ತಾವೇ ಬೇರೆಡೆಗೆ ವರ್ಗಾವಣೆ ಪಡೆದು ಹೋಗಬಹುದು. ತಾಲೂಕಿನ ಜನರ ಸೇವೆ ಮಾಡುವವರು ಮಾತ್ರ ಇಲ್ಲಿ ಇರಬೇಕು. ಇಲ್ಲವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು. ಸರ್ಕಾರಿ ಯೋಜನೆಗಳನ್ನು ಪಡೆಯಲು ಬರುವ ಜನರಿಂದ ಹಣ ವಸೂಲಿ ಮಾಡುವುದು, ಸರಿಯಾಗಿ ಕಾರ್ಯನಿರ್ವಹಿಸದೇ ಇರುವ ಅಧಿಕಾರಿಗಳನ್ನು ಕಾನೂನು ಶಿಕ್ಷೆಗೆ ಒಳಪಡಿಸಿ.