ಇಂದಿರಾಗಾಂಧಿ ತಿರುಚಿದ ಸಂವಿಧಾನ ನಮಗೆ ಬೇಕಿಲ್ಲ: ನಿಂಗರಾಜ್‌ಗೌಡ

KannadaprabhaNewsNetwork |  
Published : Jun 29, 2025, 01:33 AM IST
28ಕೆಎಂಎನ್‌ಡಿ-8ಡಾ.ಈ.ಸಿ.ನಿಂಗರಾಜ್‌ಗೌಡ | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯಲ್ಲಿ ಸಮಾಜವಾದ, ಜಾತ್ಯತೀತವಾದ ಎಂಬ ಎರಡೂ ಪದಗಳನ್ನು ಸೇರಿಸಿದ್ದಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಈ ಎರಡು ಪದಗಳನ್ನು ಸಂವಿಧಾನದಲ್ಲಿ ತುರುಕಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಮಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದ ಪ್ರಸ್ತಾವನೆ ಬೇಕಾಗಿದೆಯೇ ಹೊರತು ಇಂದಿರಾಗಾಂಧಿ ತಿರುಚಿತ ಸಂವಿಧಾನ ಪ್ರಸ್ತಾವನೆ ಅಲ್ಲ ಎಂದು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ. ನಿಂಗರಾಜ್‌ಗೌಡ ತಿಳಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯಲ್ಲಿ ಸಮಾಜವಾದ, ಜಾತ್ಯತೀತವಾದ ಎಂಬ ಎರಡೂ ಪದಗಳನ್ನು ಸೇರಿಸಿದ್ದಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಈ ಎರಡು ಪದಗಳನ್ನು ಸಂವಿಧಾನದಲ್ಲಿ ತುರುಕಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಇಂದಿರಾ ಗಾಂಧಿ ತಿರುಚಿತ ಸಂವಿಧಾನದ ಪ್ರತಿಗೆ ಕಾಂಗ್ರೆಸ್ಸಿಗರು ಬಹಳ ಪ್ರೀತಿ ತೋರಿಸುತ್ತಿದ್ದಾರೆ. ರಾಹುಲ್‌ ಗಾಂಧಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಮೂಲ ಸಂವಿಧಾನ ಪ್ರತಿ ಇದ್ದರೆ ಕೊಡಿ, ಅದನ್ನು ಓದಿ ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

೧೯೭೬ರಲ್ಲಿ ಕಾಂಗ್ರೆಸ್ ತಿರುಚಿತ ಪ್ರಸ್ತಾವನೆಯ ಸಾಲುಗಳನ್ನು ಓದಿದರೆ, ಅಜ್ಜಿಯ ಸರ್ವಾಧಿಕಾರದ ಕೆಟ್ಟಗುಣವೇ ಬಂದೀತು. ನಿಮ್ಮ ನಾಯಕರ ಒಳಿತಿಗಾದರೂ ಅಂಬೇಡ್ಕರ್ ಅವರಿಗೆ ಶರಣಾಗಿ ಎಂದು ತಿಳಿಸಿದ್ದಾರೆ.

ಜಾತ್ಯತೀತ ಹಿಂದೂಗಳ ಹಾಗೂ ಭಾರತೀಯರ ರಕ್ತದ ಕಣಕಣದಲ್ಲಿ ಬೆರೆತಿದೆ. ಸಮಾಜವಾದದ ಬಗ್ಗೆ ಆಕ್ಷೇಪವಿಲ್ಲ. ಆದರೆ, ಈ ಎರಡೂ ಕೂಡ ವಾದಗಳಷ್ಟೆ. ಸ್ವಾತಂತ್ರ‍್ಯ, ಸಮಾನತೆ, ಸೋದರತ್ವ, ಸಾಮಾಜಿಕ ನ್ಯಾಯದಂತೆ ಶಾಶ್ವತ ಮೌಲ್ಯಗಳ ಅಂಬೇಡ್ಕರ್‌ರವರದ್ದಾಗಿದೆ ಎಂದು ನಿಂಗರಾಜ್‌ಗೌಡ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ