ಸಂವಿಧಾನ ಬದ್ಧವಾಗಿ ಮೀಸಲು ಪಡೆದಿದ್ದೇವೆ

KannadaprabhaNewsNetwork |  
Published : Sep 05, 2024, 12:39 AM IST
ಪೊಟೋ 4ಬಿಕೆಟಿ11, ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ ಎಸ್. ಅಂಬಿ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು) | Kannada Prabha

ಸಾರಾಂಶ

ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ತಳವಾರ ಹಾಗೂ ಪರಿವಾರ ಸಮುದಾಯ ಕಳೆದ ಹತ್ತಾರು ವರ್ಷಗಳಿಂದ ಪರಿಶಿಷ್ಟ ಪಂಗಡದ ಮೀಸಲು ಸೌಲಭ್ಯಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತಾ ಬಂದಿದೆ. ಪರಿಣಾಮವಾಗಿ ಸರ್ಕಾರ ಈ ಎರಡು ಸಮುದಾಯಗಳ ಕುಲಶಾಸ್ತ್ರಿ ಅಧ್ಯಯನ ನಡೆಸಿದ ಬಳಿಕವೇ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರ್ಪಡೆ ಮಾಡಿದೆ. ಹಾಗಾಗಿ ತಳವಾರ ಸಮುದಾಯದವರು ನ್ಯಾಯೋಚಿತವಾಗಿ ಹಾಗೂ ಸಂವಿಧಾನ ಬದ್ಧವಾಗಿ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ವಾಲ್ಮೀಕಿ ಸಮುದಾಯದ ಮುಖಂಡರು ಅನಗತ್ಯವಾಗಿ ತಳವಾರ ಸಮುದಾಯದ ಮೀಸಲು ವಿಷಯದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಅಧಿಕಾರಿಗಳ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಿಗಳು ಸಂವಿಧಾನದ ಪ್ರಕಾರ ಯಾರು ಅರ್ಹರರು ಇದ್ದಾರೋ ಅವರಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಅನವಶ್ಯಕವಾಗಿ ತಳವಾರ ಸಮುದಾಯದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದ ಅವರು, ತಳವಾರ ಸಮುದಾಯ ರಾಜ್ಯದ ಬಹುತೇಕ ಎಲ್ಲ ಕಡೆಗಳಲ್ಲಿ ಇದ್ದು ಈ ಸಮುದಾಯ ಮೊದಲ ಪ್ರವರ್ಗ-1 ರಲ್ಲಿ ಇತ್ತು. ಹೋರಾಟದ ಬಳಿಕ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರ್ಪಡೆಯಾಗಿದೆ. ಹಾಗಾಗಿ ಮೊದಲಿನ ಜಾತಿ ಪ್ರಮಾಣ ಪತ್ರದಲ್ಲಿ ಹಿಂದು ತಳವಾರ ಇದೆ ಎಂದು ವಿವರಿಸಿದರು.

ವಾಲ್ಮೀಕಿ, ನಾಯಕ, ತಳವಾರ ಸಮುದಾಯದವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲ ಸೃಷ್ಟಿಸಿ ಹುಳಿ ಹಿಂಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ ಅವರು, ನಿಜ ತಳವಾರ ಅವರನ್ನು ಹೊರತು ಪಡಿಸಿ ಇತರೆ ಸಮುದಾಯದವರಿಗೆ ತಳವಾರ ಎಂದು ಗುರುತಿಸಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಾವು ವಿರೋಧಿಸುತ್ತೇವೆ. ಅಂತಹ ಪ್ರಸಂಗಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಭೀಮಸಿ ತಳವಾರ, ಪ್ರಭು ಗಸ್ತಿ, ಭೀಮಸಿ ಹುನ್ನೂರ, ಬಸವರಾಜ ಸೋಮಾಪೂರ, ಭೀಮು ದೇಶನೂರ, ಉಮೇಶ ಗಸ್ತಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ