ತುರುವನೂರು: ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ನಮ್ಮವರೇ ಆದ ಬಿ.ಎನ್.ಚಂದ್ರಪ್ಪ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳೋಣ ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ಕೊಡಬೇಕು. ಪಕ್ಷ ನುಡಿದಂತೆ ನಡೆದಿದ್ದು, ಇದನ್ನು ಜನರಿಗೆ ತಲುಪಿಸುವ ಕಾರ್ಯ ಆಗಬೇಕು ಎಂದರು.
ರಾಜ್ಯದಲ್ಲಿ ಬರಗಾಲ ಇದ್ದರೂ ಜನರು ವಲಸೆ ಹೋಗದಂತೆ ನೋಡಿಕೊಂಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿದೆ. ಇಷ್ಟೊಂದು ಬರಗಾಲ ಇದ್ದರು ರಾಜ್ಯಕ್ಕೆ ಒಂದು ರುಪಾಯಿ ಪರಿಹಾರ ನೀಡದೆ ಜನವಿರೋಧಿ ನಿಲುವು ತಾಳಿದೆ. ರಾಜ್ಯದ ಬಿಜೆಪಿಗರು ಕೇಂದ್ರ ಸರ್ಕಾರಕ್ಕೆ ಈ ವಿಚಾರದಲ್ಲಿ ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ರಘುಮೂರ್ತಿ ಹೇಳಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ, ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಮಂಗಳಾ ಸಿದ್ದೇಶ್, ಉಪಾಧ್ಯಕ್ಷೆ ಸುಧಾರಾಣಿ, ಚಿಕ್ಕಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷೆ ಮಾಂತಮ್ಮಾ ಎಕಾಂತಪ್ಪ, ಉಪಾಧ್ಯಕ್ಷ ಗಂಗಾಧರ, ಮಾಡನಾಯಕನಹಳ್ಳಿ ಗ್ರಾಪಂ ಅಧ್ಯಕ್ಷ ಅನಿಲ್ ಕುಮಾರ್, ಕೂನಬೇವು ಗ್ರಾಪಂ ಅಧ್ಯಕ್ಷೆ ಕವಿತಾ ನಾಗರಾಜ್, ಉಪಾಧ್ಯಕ್ಷೆ ಪೂಜಾರ್ ಮಂಜಣ್ಣ, ಗ್ರಾಮ ಪಂಚಾಯತಿ ಸದಸ್ಯರುಗಳಾದ ಮೈಲಾರಪ್ಪ, ಶೇಖರಪ್ಪ, ಲೋಕೇಶ್, ರವಿ, ವಾಜೀದ್, ಲಿಂಗಾರೆಡ್ಡಿ, ದೊರೆಸ್ವಾಮಿ, ಸಂತೋಷ, ನಾಗರಾಜ್, ಮುಖಂಡರುಗಳಾದ ರಾಜಪ್ಪ, ಸಿದ್ದೇಶ್, ಬಸವರಾಜ್, ನಿರಂಜನ್, ನಾಗೇಶ್, ಚಿತ್ರಲಿಂಗಪ್ಪ, ತಿಪ್ಪೇಸ್ವಾಮಿ, ರವಿ, ಅಜ್ಜಪ್ಪ, ಬಾಬು, ತಿಪ್ಪಣ್ಣ ಉಪಸ್ಥಿತರಿದ್ದರು.