ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ, ಯುವ ರೆಡ್ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶ, ಅನುಕೂಲಗಳನ್ನು ಕಲ್ಪಿಸಿಕೊಟ್ಟಿವೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನವನ್ನು ಅಧ್ಯಯನ ಮಾಡಿ ಅವರ ಆಶಯಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.ನಮ್ಮೊಡನೆ ಒಳ್ಳೆಯ ಗುರು ಇದ್ದರೆ ನಾವು ಗುರಿ ತಲುಪಲು ಕಷ್ಟವಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಹ ಓದಿನ ದಿನಗಳಲ್ಲಿ ಮತ್ತು ಓದು ಮುಗಿದ ನಂತರವು ಸಹ ಗುರು, ಅಧ್ಯಾಪಕರೊಂದಿಗೆ ಉತ್ತಮ ಸಂಬಂಧ, ಬಾಂಧವ್ಯ ಹೊಂದಿರಬೇಕು. ಕಷ್ಟದ ಸನ್ನಿವೇಶಗಳನ್ನು ಧೈರ್ಯವಾಗಿ ಎದುರಿಸಿ ಮುನ್ನಡೆದರೆ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.
ಗುರಿ ಸಾಧನೆಗಾಗಿ ಹಠ, ಛಲದೊಂದಿಗೆ ಮುನ್ನಡೆದರೆ ಜೀವನದಲ್ಲಿ ಖಂಡಿತ ಯಶಸ್ಸು ದೊರೆಯುತ್ತದೆ. ನಿರಂತರವಾಗಿ ಅಧ್ಯಾಪಕರ ಸಂಪರ್ಕ ಹೊಂದಿ ಸಲಹೆ ಪಡೆದುಕೊಳ್ಳಬೇಕು. ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದೀಪಿಕಾ ಅವರು ವಿಜ್ಞಾನ ವಿಷಯದಲ್ಲಿ ಪದವಿ ಮುಗಿಸಿ ಬಳಿಕ ಕಾನೂನು ಪದವಿ ಮಾಡಿ ನ್ಯಾಯಾಧೀಶರಾಗಿರುವುದು ಕಾಲೇಜಿಗೆ ಕೀರ್ತಿ ವಿಷಯವಾಗಿದೆ ಎಂದರು.
ಇದೇ ವೇಳೆ ಹಲವು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುಚಟಿಕೆ ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.