ಮಲೆನಾಡಿನ ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಮಾಡಬೇಕು: ಶಂ.ನ.ಕೃಷ್ಣಮೂರ್ತಿ

KannadaprabhaNewsNetwork |  
Published : Feb 09, 2026, 02:00 AM IST
ೇ್ | Kannada Prabha

ಸಾರಾಂಶ

ಶೃಂಗೇರಿಸಾವಿರಾರು ವರ್ಷಗಳಿಂದ ತನ್ನದೆ ಆದ ಪ್ರಾಚೀನತೆ ಹೊಂದಿ ಬಂದಿರುವ ಮಲೆನಾಡಿ ಕಲೆ, ಸಂಸ್ಕೃತಿ ಪರಂಪರೆಗಳು ಇಂದು ಅವನತಿ ಅಂಚಿಗೆ ತಲುಪುತ್ತಿದೆ. ಇದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳ ಆಪ್ತ ಸಹಾಯಕ ಶಂ.ನ ಕೃಷ್ಣಮೂರ್ತಿ ಹೇಳಿದರು.

ಮಲೆನಾಡು ಉತ್ಸವವನ್ನು ಉದ್ಘಾಟಿಸಿ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಸಾವಿರಾರು ವರ್ಷಗಳಿಂದ ತನ್ನದೆ ಆದ ಪ್ರಾಚೀನತೆ ಹೊಂದಿ ಬಂದಿರುವ ಮಲೆನಾಡಿ ಕಲೆ, ಸಂಸ್ಕೃತಿ ಪರಂಪರೆಗಳು ಇಂದು ಅವನತಿ ಅಂಚಿಗೆ ತಲುಪುತ್ತಿದೆ. ಇದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳ ಆಪ್ತ ಸಹಾಯಕ ಶಂ.ನ ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಕಿಗ್ಗಾ ಸರ್ಕಲ್ ಬಳಿ ಶ್ರೀ ಭಾರತೀ ತೀರ್ಥ ಕಲ್ಚರಲ್ ಟ್ರಸ್ಟ್ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಲೆನಾಡು ಉತ್ಸವವನ್ನು ಕಡೆಗೋಲಿನಲ್ಲಿ ಮಜ್ಜಿಗೆ ಕಡೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕಲೆ,ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಪೀಳಿಗೆಯಿಂದ ಪೀಳಿಗೆಗೆ ಮುಂದುವರೆಸಿಕೊಂಡು ಹೋಗುವ ಕೆಲಸ ಆಗಬೇಕಿದೆ.

ಶ್ರೀ ಭಾರತೀ ತೀರ್ಥ ಕಲ್ಚರಲ್ ಟ್ರಸ್ಟ್ ಮಲೆನಾಡು ಉತ್ಸವ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ, ಕಲಾವಿದರಿಗೆ ಪ್ರೋತ್ಸಾಹ, ಗುರುತಿಸಿ ಅಭಿನಂದಿಸುವ ಕೆಲಸಗಳನ್ನು ಮಾಡುತ್ತಾ ಇಂದಿಗೂ ಉಳಿಸಿಕೊಂಡು ಬಂದಿದೆ ಎಂದರು.

ಹೊದಲ ಚಂದ್ರಶೇಖರ್ ಮಾತನಾಡಿ ಮಲೆನಾಡಿನಲ್ಲಿ ನಡೆಯುತ್ತಿರುವ ಇಂತಹ ಉತ್ಸವಗಳು ಜನರಲ್ಲಿ ಕೆಲೆ, ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಉತ್ಸಾಹ ಮೂಡಿಸುತ್ತಿದೆ. ಶ್ರೀ ಭಾರತೀ ತೀರ್ಥ ಕಲ್ಚರಲ್ ಟ್ರಸ್ಟ್ ಕಲಾವಿದರನ್ನು ಸಂಘಟಿಸಿ ಪ್ರೋತ್ಸಾಹಿಸಿ ಕಲೆ ಸಂಸ್ಕೃತಿ ಬೆಳೆಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರ,ವಿವಿಧ ಕ್ಷೇತ್ರಗಳಲ್ಲಿ ಸಾದನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಗೆದ್ದೆಮನೆ ವಿಶ್ವನಾಥ್,ನಾಗೇಶ್ ಕಾಮತ್,ಮತ್ತಿತರರು ಉಪಸ್ಥಿತರಿದ್ದರು.

7 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಕಿಗ್ಗಾ ಸರ್ಕಲ್ ಬಳಿ ನಡೆದ ಮಲೆನಾಡು ಉತ್ಸವ ಕಾರ್ಯಕ್ರಮವನ್ನು ಕಡೆಗೋಲಿನಲ್ಲಿ ಮಜ್ಜಿಗೆ ಕಡೆಯುವುದರ ಮೂಲಕ ಶಂ,ನ,ಕೃಷ್ಣಮೂರ್ತಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭರ್ಜರಿ ಯಶಸ್ಸು ಕಂಡ ಕೆಪೆಕ್‌ ವಾಣಿಜ್ಯ ಮೇಳ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ