ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಹಭಾಗಿತ್ವದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ " ಕಾರ್ಯಕ್ರಮದಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಮೊದಲು ಒಳ್ಳೆಯ ಶಿಕ್ಷಣ ನೀಡಬೇಕು. 1 ರಿಂದ 10 ತರಗತಿಯವರೆಗೂ ನಾನು ಸರ್ಕಾರಿ ಶಾಲೆಯಲ್ಲಿ ಓದಿದ್ದೇನೆ. ಸರ್ಕಾರಿ ಶಾಲೆಯಲ್ಲಿ ವಿಶೇಷ ತರಬೇತಿ ಪಡೆದ ಶಿಕ್ಷಕರು ಉತ್ತಮ ಶಿಕ್ಷಣ ನೀಡುತ್ತಾರೆ. ಮಕ್ಕಳ ಗಮನ ಓದಿನ ಕಡೆ ಇರಬೇಕು, ಇದಲ್ಲದೇ ಎನ್ಸಿಸಿ, ಎನ್ಎಸ್ಎಸ್, ಸ್ಕೌಡ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ ಎಂದರು.ಸಮಾಜವು ಹೆಣ್ಣು ಮಕ್ಕಳಿಗೆ ಪೂರಕ ವಾತಾವರಣ ಕಲ್ಪಿಸಿ, ಆರ್ಥಿಕವಾಗಿ ಸ್ವಾವಲಂಬನೆ, ಮಾನಸಿಕ ಸ್ಥೈರ್ಯ, ದೈಹಿಕ, ಮಾನಸಿಕ, ಸಾಮಾಜಿಕವಾಗಿ ಎಲ್ಲದರಲ್ಲೂ ಸದೃಢರಾಗಲು ಪ್ರೇರೇಪಿಸಬೇಕು ಎಂದು ತಿಳಿಸಿದರು.
ನಕಾರಾತ್ಮಕ ಭಾವನೆ, ವಿಚಾರಗಳು ನಮ್ಮ ಸಮಾಜಕ್ಕೆ ಕಪ್ಪು ಚುಕ್ಕೆ ಆಗಿದೆ. ಪ್ರಕೃತಿ ವಿರುದ್ಧವಾಗಿ ಹೋದರೆ ಸಫಲತೆ ಕಾಣಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದೆ ಇದನ್ನು ತಡೆಯಬೇಕು, ಮಕ್ಕಳು ಪಠ್ಯಪುಸ್ತಕಗಳ ಕಡೆ ಗಮನ ಕೊಡುವಂತೆ ಪೋಷಕರಿಗೆ ಗಮನ ಹರಿಸಬೇಕು ಎಂದು ಹೇಳಿದರು.
ಜಿಲ್ಲಾ ಬಾಲ ಭವನ ಸಮಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಪ್ರತಿ ದಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಬೇಕು. ಹೆಣ್ಣು ಮಕ್ಕಳು ಬೇರೆ ಯಾವುದೇ ಆಸೆಗಳಿಗೆ ಮಾರೋ ಹೋಗದೆ, ಓದಿನ ಕಡೆ ಹೆಚ್ಚಿನ ಗಮನಹರಿಸಿ ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು ಎಂದು ಕಿವಿ ಮಾತು ಹೇಳಿದರು.
ದೇಶದಲ್ಲಿ ಲಿಂಗಾನುಪಾತ ಜಾಸ್ತಿ ಆಗುತ್ತಿದ್ದು, ಇದಕ್ಕೆ ಕಾರಣ ಭ್ರೂಣ ಹತ್ಯೆ, ಆದ್ದರಿಂದ ಇದನ್ನು ತಡೆಯಬೇಕು. ದೇಶದ ಅಭಿವೃದ್ಧಿಗೆ ಹೆಣ್ಣು ಮಕ್ಕಳು ಬಹಳ ಮುಖ್ಯ, ಹೆಣ್ಣು ಮಕ್ಕಳಲ್ಲಿ ರಕ್ತ ಹೀನತೆ, ಮುಟ್ಟು, ಗರ್ಭಿಣಿಯಾಗಿರುವ ಸಂದರ್ಭದಲ್ಲಿ ಆರೋಗ್ಯದ ಕಡೆ ಬಹಳ ಗಮನ ಕೊಡಬೇಕು ಪೌಷ್ಟಿಕ ಆಹಾರ, ಸಮತೋಲನ ಆಹಾರ, ಸಿರಿಧಾನ್ಯ, ದ್ವಿದಳ ಧಾನ್ಯ, ತರಕಾರಿಯನ್ನು ಅತಿ ಹೆಚ್ಚಾಗಿ ಸೇವಿಸಬೇಕು. ಹೆಣ್ಣು ಮಕ್ಕಳಿಗೆ ಅಭದ್ರತೆ ಹೆಚ್ಚಾಗಿದ್ದು, ಮಾನಸಿಕ ಖಿನ್ನತೆಗೆ ಒಳಗಾಗುತ್ತಾಳೆ. ಅದನ್ನು ಕಡಿಮೆ ಮಾಡಬೇಕು.
ಮನೆಯಲ್ಲಿ ಕೊಟ್ಟಿರುವ ಸ್ವಾತಂತ್ರ, ನಂಬಿಕೆಯನ್ನು ಎಲ್ಲರೂ ಉಳಿಸಿಕೊಂಡು ಮೌಲ್ಯಾಧಾರಿತ ಶಿಕ್ಷಣವನ್ನು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಸಾಧನೆ ಹಾದಿಯಲ್ಲಿ ಕಷ್ಟಗಳು ಇರುತ್ತವೆ. ಎಲ್ಲವನ್ನು ದಾಟಿ ಸಾಧನೆ ಗುರಿ ತಲುಪಬೇಕು.