ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಶ್ರದ್ಧೆ, ಶಿಸ್ತು, ಉತ್ತಮ ಗುರಿಯೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

KannadaprabhaNewsNetwork | Published : Jun 9, 2025 4:26 AM

ಮಕ್ಕಳು ಜೀವನದಲ್ಲಿ ಕಷ್ಟಪಟ್ಟ ಓದಿದರೆ ಮಾತ್ರ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿರುವ ಕಾರಣಕ್ಕೆ ಮಕ್ಕಳಿಗೆ ಕಸಾಪ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಹೆಚ್ಚಿನ ಶ್ರಮಪಟ್ಟ ಅಧ್ಯಾಯನ ಮಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ವಿದ್ಯಾರ್ಥಿಗಳು ಜೀವನದಲ್ಲಿ ಶ್ರದ್ಧೆ, ಶಿಸ್ತು ಹಾಗೂ ಉತ್ತಮ ಗುರಿಯೊಂದಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಕಸಾಪ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಕಾಶ್‌ ಮೇನಾಗರ ಅವರ ‘ಕವಿಕಾವ್ಯ ಡಿಂಡಮ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳು ಜೀವನದಲ್ಲಿ ಕಷ್ಟಪಟ್ಟ ಓದಿದರೆ ಮಾತ್ರ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿರುವ ಕಾರಣಕ್ಕೆ ಮಕ್ಕಳಿಗೆ ಕಸಾಪ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಹೆಚ್ಚಿನ ಶ್ರಮಪಟ್ಟ ಅಧ್ಯಾಯನ ಮಾಡಬೇಕು ಎಂದರು.

ನಮ್ಮ ಜೀವನದ ಸರಿದಾರಿಯನ್ನು ನಾವೇ ಗುರುತಿಸಿಕೊಳ್ಳಬೇಕು. ಓದಿನ ವಿಚಾರದಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೇ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅಧ್ಯಯನ ನಡೆಸಬೇಕೆ ಹೊರತು ನಾವೇ ತಂತ್ರಜ್ಞಾನಗಳಾಗಬಾರದು ಎಂದರು.

ಪರಿಸರವನ್ನು ಸಂರಕ್ಷಣೆ ಮಾಡುವಲು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕೈಜೋಡಿಸಬೇಕು. ಸರ್ಕಾರ ಶಾಲೆಗಳ ಉಳಿವಿಗಾಗಿ ಮುಂದಿನ ಪೀಳಿಗೆಯ ಮಕ್ಕಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾರ್‍ಯಕ್ರಮ ರೂಪಿಸಲಾಗಿದೆ ಎಂದರು.

ತಹಸೀಲ್ದಾರ್ ಸಂತೋಷ್‌ಕುಮಾರ್ ಮಾತನಾಡಿ, ನಾಲ್ವಡಿ ಅವರು ಮಂಡ್ಯ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಅವರ ಅನೇಕ ಪುಣ್ಯದ ಕೆಲಸಗಳು ಜನರ ನೆಮ್ಮದಿಯ ಬದುಕಿಗೆ ಕಾರಣವಾಗಿದೆ ಎಂದರು.

ನಾಲ್ವಡಿ ಪ್ರಶಸ್ತಿ ಸ್ವೀಕರಿಸಿ ಗಾನಸುಮ ಕೆ.ಪರಮೇಶ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇತಿಹಾಸ, ಸಾಧನೆಯನ್ನು ಮುಚ್ಚುವ ಕೆಲಸವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಕಾಶ್‌ ಮೇನಾಗರ ಅವರ ಕವಿಕಾವ್ಯ ಡಿಂಡಮ ಕೃತಿ ಬಿಡುಗಡೆಗೊಳಿಸಿ ತುರ್ತು ಕಾರ್‍ಯಕ್ರಮ ನಿಮಿತ್ತ ತೆರಳಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ 74 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂಧಿಸಲಾಯಿತು.

ಗಾನಸುಮ ಕೆ.ಪರಮೇಶ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಲಾಯಿತು. ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ಚಂದ್ರಶೇಖರಯ್ಯ, ಮುತ್ತಿಗೆರೆ ಮಂಜು, ಟಿ.ಪಿ.ರೇವಣ್ಣ, ಕನಗನಮರಡಿ ಕೃಷಿ ಪತ್ತಿನ ಸಹಕಾರದ ಅಧ್ಯಕ್ಷ ಎಚ್.ಜೆ.ರಾಮಕೃಷ್ಣ, ಕಸಾಪ ಪದಾಧಿಕಾರಿಗಳಾದ ಧರ್ಮರತ್ನಾಕರ, ಧನಂಜಯ್, ಉದ್ಯಮಿ ಶಿವಕುಮಾರ್, ಜ್ಞಾನೇಶ್‌ನರಹಳ್ಳಿ, ವೆಂಕಟೇಶ್, ಬಾಲಕೃಷ್ಣ, ಶಿವರಾಜು, ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು.