ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಅಗ್ನಿ ಶಾಮಕ ಠಾಣೆಯ ಆವರಣದಲ್ಲಿ ಇಲಾಖೆಯಿಂದ ಆಯೋಜಿಸಿದ್ದ ಅಗ್ನಿ ಶಾಮಕ ಸಪ್ತಾಹ, ಅಂಬೇಡ್ಕರ್ ಜಯಂತಿ ಮತ್ತು ಹುತಾತ್ಮರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂಬೈ ಮಹಾನಗರದ ಘಟಿಸಿದ ಅಗ್ನಿ ದುರಂತ ಕಾರ್ಯಾಚರಣೆ ವೇಳೆ ಮೃತರಾದ 66 ಜನ ಅಗ್ನಿ ಶಾಮಕ ಸಿಬ್ಬಂದಿಗೆ ಗೌರವಾರ್ಥ ಇಲಾಖೆ ಹುತಾತ್ಮರ ದಿನವನ್ನು ಆಚರಿಸುವ ಮೂಲಕ ಹುತಾತ್ಮರ ಸ್ಮರಣೆ ಮಾಡುತ್ತಿದೆ ಎಂದರು.ಇಂತಹ ಪವಿತ್ರ ಕಾರ್ಯದಲ್ಲಿ ಭಾಗವಹಿಸುತ್ತಿರುವುದು ಪುಣ್ಯದ ಕೆಲಸ. ರಾಜ್ಯದ ಯಾವುದೇ ಮೂಲೆಯಲ್ಲಿ ಅಗ್ನಿ ದುರಂತಗಳು, ಜಲ ದುರಂತಗಳು, ಕಟ್ಟಡ ದುರಂತಗಳು ಸಂಭವಿಸಿದರೆ ಅಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಸೇವೆ ದೊಡ್ಡದಾಗಿದೆ. ಹುತಾತ್ಮರ ದಿನದ ಜೊತೆಗೆ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಅಗ್ನಿ ಶಾಮಕ ಸಪ್ತಾಹ ಆಚರಿಸುವ ಮೂಲಕ ಏಪ್ರಿಲ್ 14 ರಿಂದ 20ರ ವರೆಗೆ ಏಳು ದಿನಗಳ ಕಾಲ ಅಗ್ನಿ ಅವಘಡಗಳ ಸುರಕ್ಷತೆಯ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಇದೇ ವೇಳೆ ಇಲಾಖೆ ಗೌರವ ವಂದನೆ ಸ್ವೀಕರಿಸಿದ ಶಾಸಕ ಎಚ್.ಟಿ.ಮಂಜು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಣೆ ಮಾಡಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸದಸ್ಯ ಗಿರೀಶ್, ದಿಶಾ ಕಮಿಟಿ ಸದಸ್ಯ ನರಸನಾಯಕ್ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಇಲಾಖೆಯ ಸಿಬ್ಬಂದಿ ಇದ್ದರು.