ನ್ಯಾಮತಿ ತಾಲೂಕಿನ ಸವಳಂಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ । ಬೃಹತ್ ಸೇಬು ಹಾರ ಹಾಕಿ ಅದ್ಧೂರಿ ಸ್ವಾಗತ
ಉತ್ತರ ಕರ್ನಾಟಕದ ಅಭಿವೃದ್ಧಿ ಮರೆತ, ಕಬ್ಬು ಬೆಳೆಗಾರರ ಬಾಕಿ ಹಣ ನೀಡದ, ಜಾತಿಗಣತಿ ಮುಂದಿಟ್ಟು ಆಟವಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಬಗ್ಗೆ ಸದನದಲ್ಲಿ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದರು.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಇದೇ ಮೊದಲ ಬಾರಿ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ, ಕ್ರೇನ್ ಸಹಾಯದಿಂದ ಬೃಹತ್ ಸೇಬು ಹಣ್ಣಿನ ಹಾರದ ಸನ್ಮಾನ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದನದ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತೇವೆ. ಜಾತಿ ಗಣತಿ ಕೈಗೊಂಡ ಕಾಂತರಾಜ ವರದಿಯ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆಯೆಂಬುದು ಕಾಣುತ್ತಿದೆ. ಈ ಎಲ್ಲಾ ವಿಚಾರ ಮುಂದಿಟ್ಟು ಸದನದಲ್ಲಿ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದರು.ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಪಕ್ಷ ಕಟ್ಟುವೆ:
ಇಡೀ ದೇಶ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ಪ್ರಜ್ಞಾವಂತ ಮತದಾರರ ಆಸೆ ಕೂಡ ಇದಾಗಿದ್ದು ಇದಕ್ಕೆ ಪೂರಕವಾಗಿ ಬಿಜೆಪಿಯ ಪ್ರತಿಯೊಬ್ಬರೂ ಶ್ರಮವಹಿಸಿ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಸರ್ಕಾರ ಪತನ ನಿಶ್ಚಿತ:
ಬೃಹತ್ ಸೇಬುಹಣ್ಣಿನ ಹಾರ:
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ, ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಸುರೇಂದ್ರನಾಯ್ಕ, ನೆಲಹೊನ್ನೆ ಮಂಜುನಾಥ್, ದಿಡಗೂರು ಫಾಲಾಕ್ಷಪ್ಪ, ಸಿ.ಆರ್.ಶಿವಾನಂದ, ಹೊಸಳ್ಳಿ ಶಿವು ಹುಡೇದ್, ತರಗನಹಳ್ಳಿ ರಮೇಶ್ಗೌಡ, ಬೆನಕನಹಳ್ಳಿ ಮಹೇಶ್ಗೌಡ, ನ್ಯಾಮತಿ ರವಿಕುಮಾರ್, ಮಾರುತಿ ನಾಯ್ಕ, ಮಾದೇನಹಳ್ಳಿ ನಾಗರಾಜ್, ಗಂಜಿಜನಹಳ್ಳಿ ರುದ್ರಪ್ಪ, ಕೆ.ವಿ.ಶ್ರೀಧರ, ಪೇಟೆ ಪ್ರಶಾಂತ್ ಸೇರಿ ಅವಳಿ ತಾಲೂಕುಗಳ ಮುಖಂಡರು ಇದ್ದರು.
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕಬ್ಬು ಬೆಳೆಗಾರರಿಗೆ ನೀಡಬೇಕಾದ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೇ ಸರ್ಕಾರ ಮರೆತಿದೆ. ಶಾಸಕರಿಗೆ ಬಿಡುಗಡೆಯಾಗಬೇಕಾಗಿದ್ದ ಯಾವುದೇ ಅನುದಾನ ನೀಡುತ್ತಿಲ್ಲ. ಈ ವರೆಗೆ ಒಂದು ರುಪಾಯಿ ಅನುದಾನವನ್ನೂ ಶಾಸಕರಿಗೆ ಬಿಡುಗಡೆ ಮಾಡಿಲ್ಲ.