ಧಾರವಾಡ:
ಸೋಮವಾರ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರ ನೇತೃತ್ವದಲ್ಲಿ ಎದುರಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದಲೇ ಪ್ರಹ್ಲಾದ ಜೋಶಿ ಗೆಲುವಿನ ಅಂತರ ತೀರಾ ಕಡಿಮೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಕೈ ಹಿಡಿದಿದೆ. ಆದರೆ, ನಾವು ನಿರೀಕ್ಷೆ ಮಾಡಿದಷ್ಟು ಮತದಾರರು ನಮ್ಮ ಕೈ ಹಿಡಿದಿಲ್ಲ ಎಂಬ ಬೇಸರವಿದೆ ಎಂದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಕಡಿಮೆಯಾಗುತ್ತಿದೆ ಎನ್ನುವುದಕ್ಕೆ ಅವರ ಗೆಲುವಿನ ಅಂತರವೇ ಸಾಕ್ಷಿ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಹೆಚ್ಚಿಸಿಕೊಂಡಿದೆ. ನರೇಂದ್ರ ಮೋದಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇತಿಹಾಸದಲ್ಲೇ ಎರಡು ಭಾರಿ ಪ್ರಧಾನಿಯಾದವರು ಅಷ್ಟು ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎನ್ನುವುದು ಪ್ರಮುಖ ಅಲ್ಲವೇ? ಎಂದರು.ಬರ ಪರಿಹಾರ ವಿತರಣೆಯಲ್ಲಿ ಕೆಲವು ಜನರಿಗೆ ಪರಿಹಾರ ಬಂದಿಲ್ಲ. ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರಿಗೆ ಪರಿಹಾರ ಬಂದಿಲ್ಲ ಅಂತಹ ರೈತರಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದ ಸಚಿವರಿಗೆ ಮನವರಿಕೆ ಮಾಡಲಾಗುವುದು ಎಂದರು.