ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ಜಿಲ್ಲೆಯಲ್ಲಿಯೇ ಬಬಲೇಶ್ವರ ಕ್ಷೇತ್ರವನ್ನು ಹೊರತುಪಡಿಸಿದರೆ ಮುದ್ದೇಬಿಹಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಹೆಚ್ಚಿನ ಅನುದಾನ ನೀಡಿದೆ. ಕೆಲವು ಗುತ್ತಿಗೆದಾರರು ಅಭಿವೃದ್ಧಿಗಿಂತ ರಾಜಕಾರಣವನ್ನೇ ಹೆಚ್ಚಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕ್ರಿಕೆಟ್ ಪಂದ್ಯಾವಳಿ ಹಾಗೂ ಗಣಪತಿ ಉತ್ಸವಗಳಿಗೆ ಹಣ ಖರ್ಚು ಮಾಡುವ ಬದಲು ಅದೇ ಹಣವನ್ನು ರಸ್ತೆ ಕಾಮಗಾರಿಗಳಿಗೆ ಬಳಸಿಕೊಂಡು, ಪಡೆದಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು.
ಕೆಲವರಿಗೆ ಒಕ್ಕಲಿಗನಾಗಲು ಏನು ಬೇಕು ಎಂಬುವುದೇ ಗೊತ್ತಿಲ್ಲ. ಕೇವಲ ಹಸಿರು ಟವೆಲ್ ಹಾಕಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನಾಗರಬೆಟ್ಟ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಇಂದು ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವವರು ಇನ್ನೂ ರಾಜಕೀಯವಾಗಿ ಕಾಣಿಸಿಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು.ಜನರ ಋಣ ನಮ್ಮ ಮೇಲಿದೆ. ಸ್ಥಳೀಯ ಸಮಸ್ಯೆಗಳು ಮತ್ತು ಕಾಮಗಾರಿಗಳ ವಿಚಾರವನ್ನೇ ಆಧಾರವಾಗಿಟ್ಟುಕೊಂಡು ಇಲ್ಲಿಯವರೆಗೆ ರಾಜಕಾರಣ ಮಾಡಿದ್ದೇನೆ. ಮತಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಿ ಪರಿಶೀಲನೆ ನಡೆಸಬೇಕು. ಕೆಲವು ಗುತ್ತಿಗೆದಾರರು ಅರ್ಧಮರ್ಧ ಕಾಮಗಾರಿ ನಡೆಸುತ್ತಿದ್ದು, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಅಗತ್ಯವಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಕ್ಸ್ವೃತ್ತಿ ಬಿಟ್ಟು ರಾಜಕಾರಣ ಮಾಡುತ್ತಿರುವ ಗುತ್ತಿಗೆದಾರರು:
ಇಂದು ಕೆಲವು ಗುತ್ತಿಗೆದಾರರು ತಮ್ಮ ಮೂಲ ವೃತ್ತಿ ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶಾಸಕರಾಗುವ ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗಲಿ ಎಂದು ನಾನು ಹಾರೈಸುತ್ತೇನೆ. ನಾನು ಯಾರ ಶತ್ರುವೂ ಅಲ್ಲ. ಅವರು ನನ್ನೊಂದಿಗೆ ಹೇಗೆ ಸಂಬಂಧ ಇಟ್ಟುಕೊಳ್ಳುತ್ತಾರೋ, ಅದೇ ರೀತಿಯ ಸಂಬಂಧವನ್ನು ನಾನು ಕೂಡ ಅವರೊಂದಿಗೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿದರು.
ಇದೇ ವೇಳೆ ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರ ಕುರಿತು ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರ ಪೈಕಿ ನಾನು ಮೊದಲ ಸಾಲಿನಲ್ಲಿ ಇದ್ದೇನೆ. ಆದರೆ ಕೆಲವರು ನನ್ನನ್ನು ರಾಜಕೀಯವಾಗಿ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.