ಕನ್ನಡಪ್ರಭ ವಾರ್ತೆ ಉಡುಪಿ
ಅವರು ಗುರುವಾರ ಕೃಷ್ಣಮಠದ ರಾಜಾಂಗಣದಲ್ಲಿ ಪದ್ಮಶಾಲಿ ನೇಕಾರರ ಪ್ರತಿಷ್ಠಾನ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆ.1ರಿಂದ 11ರ ವರೆಗೆ ನಡೆಯುವ ಕೈಮಗ್ಗ ಸೀರೆಗಳ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಹೆಣ್ಣುಮಕ್ಕಳು ಸೀರೆಯನ್ನು ಉಡುವುದು ನಮ್ಮ ಸಂಸ್ಕೃತಿಯ ಪೂಜ್ಯತೆಯ ಶ್ರೇಷ್ಠತೆಯ ಸಂಕೇತವಾಗಿದೆ. ಸೀರೆಯ ಪಾವಿತ್ರ್ಯತೆ ಬೇರೆ ಬಟ್ಟೆಗಳಲ್ಲಿ ಸಿಗುವುದಿಲ್ಲ, ಈ ಹಿನ್ನೆಲೆಯಲ್ಲಿ ಕೈಮಗ್ಗದ ಸೀರೆಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದರು.ಇಂದು ಅನೇಕ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೊಳಿಸಲಾಗಿದೆ, ಕೃಷ್ಣಮಠದಲ್ಲಿಯೂ ಡ್ರೆಸ್ ಕೋಡ್ ಜಾರಿಗೆ ತರಲು ಒತ್ತಾಯ, ಒತ್ತಡಗಳಿವೆ ಎಂದ ಶ್ರೀಗಳು, ಹಬ್ಬಗಳು ಆರಂಭವಾಗುವುದೇ ಹೊಸ ಬಟ್ಟೆಗಳ ಖರೀದಿಯಿಂದ, ಉಡುಪಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಆಚರಣೆ ಸೀರೆಗಳ ಉತ್ಸವದಿಂದ ಆರಂಭವಾಗುತ್ತಿರುವುದು ಸಮಯೋಚಿತವಾಗಿದೆ ಎಂದು ಹೇಳಿದರು.
ಉತ್ಸವದ ಆಯೋಜನಾ ಸಮಿತಿ ಅಧ್ಯಕ್ಷ ಚಂದನ್ ಶೆಟ್ಟಿಗಾರ್ ಸ್ವಾಗತಿಸಿದರು. ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಾಶಿವ ಗೋಳಿಜೋರ ಕಾರ್ಯಕ್ರಮ ನಿರೂಪಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷರಾದ ಮಂಜುನಾಥ ಮಣಿಪಾಲ್, ಸರೋಜ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.