ಬಿಸಿಲೆ ಘಾಟ್‌ನಲ್ಲಿ ಮದುವೆ ವಾಹನ ಪಲ್ಟಿ: ಓರ್ವ ಸಾವು

KannadaprabhaNewsNetwork |  
Published : Oct 31, 2025, 03:00 AM IST
ಪಲ್ಟಿಯಾಗಿರುವ ವಾಹನ | Kannada Prabha

ಸಾರಾಂಶ

ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ಓರ್ವ ಮೃತಪಟ್ಟು, ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ಓರ್ವ ಮೃತಪಟ್ಟು, ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಬಿಸ್ಲೆ ಸಮೀಪದ ಕೂಡುರಸ್ತೆ ವನಗೂರಿನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಗುರುವಾರ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವರ ಸಹಿತ ಮನೆಯವರು ಬುಧವಾರವೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಗುರುವಾರ ಬೆಳಗ್ಗೆ ವ್ಯಾನ್ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಲೆ ಘಾಟ್ ನ ತಿರುವಿನಲ್ಲಿ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಇಪ್ಪಕ್ಕೂ ಅಧಿಕ ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ವ್ಯಾನ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 20 ಮಂದಿ ಗಾಯಗೊಂಡಿದ್ದು, ಏಳು ಮಂದಿ ಗಂಭೀರ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಶಿವರಾಜ್ (50) ಎಂಬವರನ್ನು ಸುಬ್ರಹ್ಮಣ್ಯ ಆಸ್ಪತ್ರೆಯಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗಿತ್ತು. ಆದರೆ ಅವರು ಅಲ್ಲಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ.

ಘಟನೆ ನಡೆದ ಕೂಡಲೇ ಘಟನಾ ಸ್ಥಳದಿಂದ ಗಾಯಾಳುಗಳನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆರು ಅಂಬ್ಯೂಲೆನ್ಸ್‌ಗಳಲ್ಲಿ ಪುತ್ತೂರು ಹಾಗೂ ಮಂಗಳೂರಿಗೆ ಕರೆದೊಯ್ಯಲಾಯಿತು. ಸ್ಥಳೀಯರು ಕಾರ್ಯಾಚರಣೆಗೆ ಸಹಕಾರ ನೀಡಿದ್ದಾರೆ.ಮಂಜುಳಾ (49), ವಿಜಯಮ್ಮ (69), ದೇವರಾಜ್ (56), ಗೌರಮ್ಮ (65), ಪ್ರಶಾಂತ್ (42), ಸರಿತಾ (36), ದಿವ್ಯಾ (50), ಧರ್ಮ ಗೌಡ (61), ಪ್ರವೀಣ್ (45), ನೀಲಮ್ಮ (50), ಪಕೀರಪ್ಪ (63), ಯಶೋಧಾ(50), ಮದನ್ (40), ಗಂಗಮ್ಮ (60), ವೆಂಕಟೇಶ್ (50), ಶಿವರಾಮ(55), ನಿರ್ಮಲಾ (48), ಲಿಂಗಮ್ಮ (65), ಗೀತಾ (50) ಮೊದಲಾದವರು ಗಾಯಗೊಂಡವರು. ಇದರಲ್ಲಿ ಮೃತ ಶಿವರಾಜ್ (50) ಅವರನ್ನು ಸೇರಿದಂತೆ 13 ಮಂದಿಯನ್ನು ಪುತ್ತೂರು ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಒಟ್ಟು 11 ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಯಿತು. ಸಕಲೇಶಪುರ ತಾಲೂಕಿನ ಯಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ