)
ಬಂಟ್ವಾಳ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪೂರ್ಣಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಸಿರೋಡಿನಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.ಬಿಜೆಪಿ ಪರವಾಗಿ ಘೋಷಣೆ ಕೂಗಿದ ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿತಿಂಡಿ ಹಂಚಿದರು.ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ರಾಜ್ಯ ನಾಯಕಿ ಸುಲೋಚನ ಜಿ.ಕೆ. ಭಟ್, ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ರಾಮದಾಸ್ ಬಂಟ್ವಾಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಮೋನಪ್ಪ ದೇವಶ್ಯ, ಪ್ರಭಾಕರ್ ಪ್ರಭು, ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ದಾಸ್, ಪ್ರಣಾಮ್ ಅಜ್ಜಿಬೆಟ್ಟು, ಮಹೇಶ್ ಶೆಟ್ಟಿ, ಭಾಸ್ಕರ ಟೈಲರ್, ಕಾರ್ತಿಕ್ ಬಲ್ಲಾಳ್, ಸದಾನಂದ ಹಳೆಗೇಟು, ಕೇಶವ ದೈಪಲ, ಮನೋಜ್ ಕಳ್ಳಿಗೆ, ಪ್ರೇಮನಾಥ ಶೆಟ್ಟಿ, ಸುನಿಲ್ ರೋಡ್ರಿಗಸ್, ಎಲಿಯಾಸ್ ಮತ್ತಿತರರು ಉಪಸ್ಥಿತರಿದ್ದರು.