ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿ ಕಟ್ಟುವಲ್ಲಿ ಯಡಿಯೂರಪ್ಪರಷ್ಟೇ ಈಶ್ವರಪ್ಪರೂ ದುಡಿದಿದ್ದಾರೆ. ಅವರೆಂದೂ ಚಿಗುರಲ್ಲ ಹೆಮ್ಮರ. ಈಶ್ವರಪ್ಪನವರು ರಾಜ್ಯದಲ್ಲೇ ಹೆಮ್ಮರವಾಗಿ ಬೆಳೆದು ನಿಂತಿದ್ದು, ಅವರು ಸಾವಿರಾರು ಕಾರ್ಯಕರ್ತರನ್ನು ಬೆಳೆಸಿದ್ದಾರೆ. ನಾಯಕರನ್ನಾಗಿ ಮಾಡಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಗೆಲ್ಲಿಸಿದ್ದಾರೆ. ಜಿ.ಪಂ.ಸದಸ್ಯರನ್ನಾಗಿ ಮಾಡಿದ್ದಾರೆ. ಮೇಯರ್, ಉಪ ಮೇಯರ್, ನಿಗಮಗಳ ಅಧ್ಯಕ್ಷರನ್ನಾಗಿ ಮಾಡಿ, ನಿಷ್ಠಾವಂತ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡಿದ್ದಾರೆ. ಬೇಳೂರು ಯಾರನ್ನು ಬೆಳೆಸಿದ್ದಾರೆ. ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಈಶ್ವರಪ್ಪನವರ ರಾಜಕೀಯ ಜೀವನವೇ ನೆಲೆಗಟ್ಟಿನಲ್ಲಿ ಬೆಳೆದು ಬಂದಿದೆ. ರಾಷ್ಟ್ರಪ್ರೇಮಿ ಮುಸ್ಲಿಮರನ್ನು ಅವರು ಎಂದಿಗೂ ವಿರೋಧಿಸುವುದಿಲ್ಲ. ಆದರೆ ಧರ್ಮವಿರೋಧಿಗಳು ಯಾರೇ ಆದರೂ ಅವರನ್ನು ವಿರೋಧಿಸದೆ ಬಿಡುವುದಿಲ್ಲ. ಬಹುಶಃ ಹಿಂದೂತ್ವವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಹಿಂದೂ ವಿರೋಧಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ಕನಸಿನಿಂದ ಬೇಳೂರು ಗೋಪಾಲಕೃಷ್ಣ ಅವರು ಈಶ್ವರಪ್ಪನವರ ಬಗ್ಗೆ ವೈಯಕ್ತಿಕ ನೆಲೆಯಲ್ಲಿ ಮಾತನಾಡಿರಬಹುದು ಎಂದು ದೂರಿದರು.ರಾಜಕೀಯ ಲಾಭಕ್ಕಾಗಿ ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಒಂದೇ ಹಂತದಲ್ಲಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ರಾಷ್ಟ್ರಭಕ್ತ ಬಳಗವು ತೀವ್ರವಾಗಿ ಖಂಡಿಸಿದೆ. ಕೂಡಲೇ ಬೇಳೂರು ಗೋಪಾಲಕೃಷ್ಣ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರದ ಜನರ ಜೊತೆ ನಿಲ್ಲುತ್ತಾರೋ ಅಥವಾ ಯೋಜನೆಯ ಪರವಾಗಿ ನಿಲ್ಲುತ್ತಾರೋ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಸಾವಿರಾರು ಕೋಟಿ ರು. ವೆಚ್ಚದ ಈ ಯೋಜನೆಯಿಂದ ತಮಗೆ ಏನಾದರೂ ಲಾಭದ ನಿರೀಕ್ಷೆ ಇರಬಹುದೇನೋ ಎಂಬ ಅನುಮಾನವನ್ನು ಸಾಗರದ ಜನತೆಯೇ ವ್ಯಕ್ತಪಡಿಸಿದ್ದಾರೆ ಎಂದು ಕುಟುಕಿದರು.
ಮುಂದೆಯೂ ಈ ರೀತಿಯ ಹೋರಾಟಗಳಿಗೆ ಈಶ್ವರಪ್ಪನವರೇ ಮುಂದಾಗುತ್ತಾರೆ. ಎಸ್.ಬಂಗಾರಪ್ಪ ಅವರ ಶಿಷ್ಯರಾಗಿರುವ ಬೇಳೂರು ಗೋಪಾಲಕೃಷ್ಣ ಅವರ ಬಾಯಲ್ಲಿ ಇಂತಹ ಮಾತುಗಳು ಕೇಳಿ ಬಂದಿದ್ದು ಸರಿಯಲ್ಲ. ಅವರು ಇನ್ನು ಮುಂದಾದರೂ ದುರುದ್ದೇಶದಿಂದ ಮಾತನಾಡದೆ ಸಮಚಿತ್ತದಿಂದ ಹೇಳಿಕೆ ನೀಡಬೇಕು ಎಂದು ಹರಿಹಾಯ್ದರು.
-----------
ಬೇಳೂರು ಮನೆಗೆ ಮಹಿಳೆಯರಿಂದ ಮುತ್ತಿಗೆಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪರಂತ ನಾಯಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಇದು ಮುಂದುವರಿದರೆ ಅವರಿಗೆ ಮಾನಸಿಕ ಚಿಕಿತ್ಸೆಗೆ ಒಳಪಡಿಸಬೇಕಾಗುತ್ತದೆ ಈ. ವಿಶ್ವಾಸ್ ಕಿಡಿಕಾರಿದರು.
-------------------
ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಮೋಹನ್ ಜಾಧವ್ ಮಾತನಾಡಿದರು.