ಕನ್ನಡಪ್ರಭ ವಾರ್ತೆ ಲಾಡ್ಲಾಪುರ/ಚಿತ್ತಾಪುರ
ಲಾಡ್ಲಾಪುರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ನೀವು ಕಾಂಗ್ರೆಸ್ಗೆ ಮತ ನೀಡಿ ಎಂದು ಒತ್ತಿ ಹೇಳಿದ ಖರ್ಗೆ, ಎಲ್ಲಾ ಗ್ಯಾರಂಟಿಗಳನ್ನು ಬಂದ್ ಮಾಡುವಂತೆ ಬಿಜೆಪಿಯವರು ತಕರಾರು ತೆಗೆದಿದ್ದಾರೆ. ಅವರ ಪ್ರಕಾರ ಗ್ಯಾರಂಟಿ ಬಂದ್ ಮಾಡಿದರೆ, ಬಡವರಿಗೆ ತೊಂದರೆಯಾಗುತ್ತದೆ. ಅವರ ಮಾತು ಕೇಳಿ ನಾವು ಬಂದ್ ಮಾಡುವುದಿಲ್ಲ ಎಂದರು.ಗ್ಯಾರಂಟಿಗಳಿಂದ ಬರುವ ಹಣ ಸದ್ಭಳಕೆಯಾಗುತ್ತಿದೆ. ಶಾಲಾ ಮಕ್ಕಳ ಫೀಸು, ಮನೆ ಸಂಸಾರಕ್ಕೆ ಬಳಕೆಯಾಗುತ್ತಿದೆ. ಇದರಿಂದಾಗಿ ಬಹಳಷ್ಟು ಕುಟುಂಬಗಳು ಸ್ವಾವಲಂಬಿಗಳಾಗಿ ಜೀವನ ನಡೆಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಬದ್ದತೆಯಾಗಿದೆ. ಇದನ್ನು ಬಿಜೆಪಿಯವರು ಟೀಕಿಸುತ್ತಾರೆ. ಅವರ ಮಾತಿಗೆ ಬೆಲೆ ಕೊಡದೆ ಕಾಂಗ್ರೆಸ್ ಗೆ ಬೆಂಬಲಿಸಿ ಎಂದು ಖರ್ಗೆ ಮನವಿ ಮಾಡಿದರು.
ವೇದಿಕೆಯ ಮೇಲೆ ಭೀಮಣ್ಣ ಸಾಲಿ, ಸಿದ್ದುಗೌಡ ಪಾಟೀಲ್ ಅಫಜಲ್ ಪುರಕರ್, ವೀರನಗೌಡ ಪರಸರೆಡ್ಡಿ ಸೇರಿದಂತೆ ಹಲವರಿದ್ದರು.