ದೊಡ್ಡಬಳ್ಳಾಪುರ: ಕನ್ನಡ ಸಂಘಟನೆಗಳ ಕಾರ್ಯಕರ್ತರಿಗೆ ಸಾಹಿತ್ಯದ ಆಳವಾದ ಅರಿವು ಮುಖ್ಯವಾಗಿದೆ. ಭಾಷಾ ವಿಷಯದಲ್ಲಿ ಭಾವನಾತ್ಮಕತೆ ಎಷ್ಟು ಮುಖ್ಯವೋ ಭಾಷೆಯ ಬಗೆಗಿನ ಜ್ಞಾನವು ಸಹ ಅಷ್ಟೇ ಮುಖ್ಯವಾದದ್ದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಹೇಳಿದರು.
ಕನ್ನಡ ಭಾಷೆಯ ಕುರಿತು ಬೆಂಗಳೂರಿನಲ್ಲಿ ಕೆಲವರ ನಡವಳಿಕೆಗಳು ಹಾಗೂ ಹೇಳಿಕೆಗಳಿಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯವನ್ನು ಎಲ್ಲ ಕನ್ನಡಗಿರು ಬೆಳೆಸಿಕೊಳ್ಳಬೇಕು. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಬಾನು ಮುಷ್ತಾಕ್ ಅವರ ಕಥ ಸಂಕಲನ ಕೃತಿ ಬೂಕರ್ ಪ್ರಶಸ್ತಿ ಪಡೆದಿರುವುದೇ ನಮ್ಮ ಸಾಹಿತ್ಯ, ಭಾಷೆಯ ಹಿರಿಮೆಗೆ ಸಾಕ್ಷಿಯಾಗಿದೆ ಎಂದರು.
ಮನಸ್ಸಿನ ವಾಸ್ತು ಬದಲಾಗಲಿ:ರಾಜ್ಯ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ ಸದಸ್ಯ ಹುಲಿಕಲ್ ನಟರಾಜ್ ಮಾತನಾಡಿ, ಈಗ ಎಲ್ಲವೂ ‘ಮನಿ’ಸ್ಥಿತಿಯೇ ನಿರ್ಧರಿಸುತ್ತದೆ ಎಂದಾಗಿದೆ. ಹಣವನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ ಎನ್ನುವಂತಾಗಿದೆ. ಅಧಿಕಾರದಿಂದ ಸಂಪತ್ತು ಸುಗಮನವಾಗಿ ಹರಿದುಬರುತ್ತದೆ ಎನ್ನುವಂತಾಗಿದೆ. ಇದರಿಂದ ಪ್ರಜಾಪ್ರಭುತ್ವ ಹಾಸ್ಯಾಸ್ಪದ ಎಂದೆನಿಸಿದೆ. ಇದನ್ನು ಹೋಗಲಾಡಿಸಬೇಕು ಎಂದರೆ ನಮ್ಮತನ,ವ್ಯಕ್ತಿತ್ವ, ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು
ಕನ್ನಡ ಚಳವಳಿ ಭಾವನಾತ್ಮಕ ಅಲ್ಲ:
ಧರ್ಮದ ಅಮಲಿನಲ್ಲಿ ವಿವೇಕ ನೆಲಸಮ:
ಶಿಬಿರದಲ್ಲಿ ಕರ್ನಾಟಕ ರಣಧೀರಪಡೆಯ ಹರೀಶ್ ಭೈರಪ್ಪ, ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಸುಲೋಚನಮ್ಮ ವೆಂಕಟರೆಡ್ಡಿ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ನಾಯಕ್, ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್, ಕಾರ್ಯದರ್ಶಿ ಡಿ.ಪಿ.ಆಂಜನೇಯ ಮತ್ತಿತರರು ಉಪಸ್ಥಿತರಿದ್ದರು.
16ಕೆಡಿಬಿಪಿ2- ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಕನ್ನಡ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಉದ್ಘಾಟಿಸಿದರು.
16ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಕನ್ನಡ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಮಾತನಾಡಿದರು.