ಧಾರವಾಡ:
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ದೇಶಿಯ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಹೇಳಲಾಗಿತ್ತು. ಆದರೆ, ಆ ಭರವಸೆ ಈಡೇರದಿರುವುದು ಈ ಭಾಗದ ಜನತೆಯ ದುರ್ದೈವವೇ ಸರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾಗರಿಕರ ಒತ್ತಾಯದ ಮೇಲೆ ಹು–ಧಾ ಬೈಪಾಸ್ ಅಗಲೀಕರಣ ಆಗುತ್ತಿದೆ. ಹುಬ್ಬಳ್ಳಿ ಕೇಂದ್ರವಾಗಿ ಬೆಳಗಾವಿ, ಗೋವಾ, ಧಾರವಾಡ, ಬಾಗಲಕೋಟೆ, ವಿಜಯಪುರ, ಹಾವೇರಿ ವೇಗವಾಗಿ ಬೆಳೆಯುತ್ತಿವೆ. ಈ ನಿಟ್ಟಿನಲ್ಲಿ ಬೆಂಗಳೂರು ಸಮೀಪ ಬದಲು ಹುಬ್ಬಳ್ಳಿಯಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೊದಲು ಮಾಡುವುದು ಸೂಕ್ತ. ಇದರಿಂದ ಅಭಿವೃದ್ಧಿ ವೇಗವಾಗುವುದಲ್ಲದೇ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಡುತ್ತದೆ. ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉತ್ತರ ಕರ್ನಾಟಕದವರೇ ಆದ ಎಂ.ಬಿ. ಪಾಟೀಲ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು ಕೆಲಸ ಮಾಡಬೇಕು. ಇಲ್ಲದಿದ್ದರೇ ಈ ಭಾಗದ ನಾಗರಿಕರ ಜನಾಂದೋಲನ ರೂಪಿಸಬೇಕಾಗುವುದು ಎಂದು ಎಚ್ಚರಿಸಿದ್ದಾರೆ.