ಕೊಪ್ಪಳ:
ಬುಧವಾರ ''''''''ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ''''''''ದ ಅಂಗವಾಗಿ ನಗರದ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷಾತೀತವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ದಶಕಗಳಷ್ಟು ಹೋರಾಟ ನಡೆದಿವೆ. ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ. ಈ ಅವಧಿಯಲ್ಲಿ ಸರ್ಕಾರ ಬಿಡುಗಡೆ ಮಾಡಿದ ಅನುದಾನ, ಅದು ಬಳಕೆಯಾದ ರೀತಿ, ಈ ಭಾಗದ ಯುವಕರಿಗೆ ಸಿಕ್ಕ ಸರ್ಕಾರಿ ಹುದ್ದೆ ಹಾಗೂ ಪ್ರಸ್ತುತ ಖಾಲಿ ಹುದ್ದೆಗಳ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳಿದರು.ದೇಶಕ್ಕೆ ಸ್ವಾತಂತ್ರ್ಯ ಬಂದ ಆನಂತರ ನಮ್ಮವರಿಂದಲೇ ವಿಮೋಚನೆಗಾಗಿ ಹೋರಾಡಬೇಕಾಯಿತು. ಆನಂತರ ಅಭಿವೃದ್ಧಿಗಾಗಿ ಬೀದಿಗಿಳಿಯಬೇಕಾಯಿತು. ಈಗ ನಮ್ಮ ಹಕ್ಕುಗಳಿಗಾಗಿ ಸರ್ಕಾರದ ಕಣ್ಣು ತೆರೆಸಲು ಪಕ್ಷಾತೀತವಾಗಿ ಆಂದೋಲನ ಹಮ್ಮಿಕೊಳ್ಳುವ ಪರಿಸ್ಥಿತಿ ಇದೆ. ಇಲ್ಲದಿದ್ದರೆ ನಮಗೆ ನ್ಯಾಯ ಸಿಗುವುದಿಲ್ಲ ಎಂದರು.
ಧ್ವಜಾರೋಹಣ ನೆರವೇರಿಸಿದ ಪಕ್ಷದ ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ, ಕೊಪ್ಪಳ ಹಾಗೂ ಯಾದಗಿರಿ ಕಳೆದ ದಶಕಗಳಲ್ಲಿ ರಚನೆಗೊಂಡ ಜಿಲ್ಲೆಗಳು. ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿವೆ. ಈ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಬೇಕು ಎಂದು ಹೇಳಿದರು.
ಸಂಸ್ಕೃತಿ ವಿಭಾಗದ ಜಿಲ್ಲಾಧ್ಯಕ್ಷ ಮಂಜುನಾಥ ಸೊರಟೂರ, ವಿಮೋಚನಾ ಚಳವಳಿಯಲ್ಲಿ ಹುತಾತ್ಮರಾದವರ ಕುರಿತು ಮಾತನಾಡಿದರು. ನಗರ ಅಧ್ಯಕ್ಷ ಸೋಮನಗೌಡ ಹೊಗರನಾಳ, ಉಪಾಧ್ಯಕ್ಷ ಮೂರ್ತ್ಯಪ್ಪ ಹಿಟ್ನಾಳ, ಒಬಿಸಿ ಜಿಲ್ಲಾಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಚುನಾವಣೆ ಅಧಿಕಾರಿ ಶಿವಕುಮಾರ್ ಏಣಿಗಿ ಉಪಸ್ಥಿತರಿದ್ದರು.