ಕನ್ನಡಪ್ರಭ ವಾರ್ತೆ ಸೊರಬ
ಇಂಥ ಪ್ರಶ್ನೆಯನ್ನು ಶಾಲಾ ಮಕ್ಕಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮಕ್ಕಳ ಗ್ರಾಮಸಭೆಯಲ್ಲಿ ಪ್ರಶ್ನಿಸಿದ ಘಟನೆ ಸೊರಬ ತಾಲೂಕಿನಲ್ಲಿ ನಡೆಯಿತು.
ಬುಧವಾರ ಶಿಗ್ಗಾ ಗ್ರಾಮದ ಡಾ. ಅಂಬೇಡ್ಕರ್ ಭವನದಲ್ಲಿ ಶಿಗ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆಯಲ್ಲಿ ನಡೆಯಿತು. ಪ್ರತಿನಿತ್ಯ ಸರತಿಯಲ್ಲಿ ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಪ್ರಕ್ರಿಯೆಯಿಂದ ಸರ್ಕಾರ ನಮ್ಮನ್ನು ಮುಕ್ತಗೊಳಿಸಿರುವುದು ಸಂತೋಷದ ವಿಷಯ. ಆದರೆ ಯಾರೂ ಸ್ವಚ್ಛಗೊಳಿಸದ ಶಾಲೆಗಳ ಶೌಚಗೃಹ ದುರ್ನಾತ ಬೀರುವುದನ್ನು ತಪ್ಪಿಸಲು ಯಾವ ಕ್ರಮ ತೆಗೆದುಕೊಂಡಿದ್ದೀರಾ? ಎಂದು ಹಾಜರಿದ್ದ ಮಕ್ಕಳು ಮೇಲಿಂದ ಮೇಲೆ ಸಭೆಯಲ್ಲಿದ್ದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಪ್ರಶ್ನೆಗಳ ಸುರಿಮಳೆ ಸುರಿದು ಪೇಚಿಗೆ ಸಿಲುಕಿಸಿದರು.ಮಕ್ಕಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಜಗದೀಶ್ ಮಾತನಾಡಿ, ಶಾಲೆಗಳ ಶೌಚಾಲಯ ಸ್ವಚ್ಛಗೊಳಿಸುವ ವಿಷಯ ಚರ್ಚೆಯಲ್ಲಿದೆ. ಸದ್ಯದ ಮಟ್ಟಿಗೆ ಶೌಚಾಲಯ ಯಾರು ಸ್ವಚ್ಛಗೊಳಿಸಬೇಕು ಎನ್ನುವ ಬಗ್ಗೆ ಮಕ್ಕಳ ಪೋಷಕರು, ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಚರ್ಚೆಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ಅಲ್ಲದೇ, ಗ್ರಾಮದ ಕೆಲವು ಕಿಡಿಗೇಡಿಗಳು ಶಾಲಾ ಆವರಣಕ್ಕೆ ನುಗ್ಗಿ ಆವರಣ ಅಶುದ್ಧಗೊಳಿಸುವ ಜೊತೆಗೆ ಶಾಲೆಯ ಪರಿಕರಗಳನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆಯೂ ಗಮನಹರಿಸಬೇಕು. ಭಾರತೀಯ ಸಂಸ್ಕೃತಿ ಬಿಂಬಿಸುವ ನೀತಿ ಕಥೆಗಳು, ವೈಜ್ಞಾನಿಕ ಮನೋಭಾವದ ಕಥೆ ಪುಸ್ತಕಗಳನ್ನು ಶಾಲಾ ಗ್ರಂಥಾಲಯಗಳಿಗೆ ನೀಡಬೇಕು. ಶಿಗ್ಗಾ ಗ್ರಾಪಂ ವ್ಯಾಪ್ತಿಯಲ್ಲಿ ಓಡಾಡಲು ಯೋಗ್ಯವಲ್ಲದ ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಮುಂದಾಗುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮಕ್ಕಳು ಮನವಿ ಮಾಡಿದರು.
- - - -03ಕೆಪಿಸೊರಬ01:
ಸೊರಬ ತಾಲೂಕಿನ ಶಿಗ್ಗಾ ಗ್ರಾಮದ ಡಾ. ಅಂಬೇಡ್ಕರ್ ಭವನದಲ್ಲಿ ಶಿಗ್ಗಾ ಗ್ರಾಪಂ ವ್ಯಾಪ್ತಿಯ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿ ಎಂ.ಎನ್. ಗಾರ್ಗಿ ಮಾತನಾಡಿದರು.