ಹೊಸಕೋಟೆ: ದೇಶ ದ್ರೋಹದ ಕೃತ್ಯ ಯಾರೇ ಮಾಡಿದ್ರೂ ಅದು ತಪ್ಪು. ಆದ್ದರಿಂದ ಅಂತಹವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕುರಿತು ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯಿಸಿದರು.
ರಾಜಕೀಯ ಲೇಪನ ಬೇಡ:
ಅಲ್ಲದೆ ಯಾರೋ ಒಬ್ಬರು ಘೋಷಣೆ ಕೂಗಿದರು ಎಂದು ಬಿಜೆಪಿಯವರು ವಿನಾಕಾರಣ ರಾಜಕೀಯ ಲೇಪನ ಮಾಡಿ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದು ಸರಿಯಲ್ಲ. ಅಲ್ಲದೆ ಎಲ್ಲರನ್ನೂ ಒಂದೇ ದೃಷ್ಠಿಕೋನದಲ್ಲಿ ನೋಡುವುದು ಸರಿಯಲ್ಲ. ಆದ್ದರಿಂದ ಸಮಗ್ರ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ವಿನಾಕಾರಣ ರಾಜಕೀಯಗಿ ಅಸ್ತ್ರವಾಗಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.ಅಭಿವೃದ್ದಿಗೆ ಆದ್ಯತೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಬಡ, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ವರ್ಗದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಹೊಸಕೋಟೆಯನ್ನು ಮಾದರಿ ನಗರವನ್ನಾಗಿ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.
ಫೋಟೋ: 28 ಹೆಚ್ಎಸ್ಕೆ 4ಹೊಸಕೋಟೆಯ ಟಿಜಿ ಬಡಾವಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.