ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್

KannadaprabhaNewsNetwork |  
Published : Aug 05, 2024, 12:34 AM IST
 | Kannada Prabha

ಸಾರಾಂಶ

ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.

ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ । ‘ಮೈತ್ರಿ’ ಪಾದಯಾತ್ರೆ ಸಿಎಂ ಜನಪ್ರಿಯತೆ ಕುಗ್ಗಿಸುವ ತಂತ್ರ

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಅವರ ಜನಪ್ರಿಯತೆ ಸಹಿಸದೆ ಬಿಜೆಪಿ ವಿನಾಕಾರಣ ಆರೋಪ ಮಾಡುವ ಮೂಲಕ ತಂತ್ರಗಾರಿಕೆ ನಡೆಸುತ್ತಿದೆ, ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.

ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು. ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಗ್ರಾಮಸ್ಥರ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದರು.

ಮುಡಾ ಹಗರಣ ಮತ್ತು ವಾಲ್ಮೀಕಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾತ್ರವಿಲ್ಲ, ಮುಡಾ ಹಗರಣ ನಡೆದಿರುವುದು ಬಿಜೆಪಿ ಸಕಾ೯ರದಲ್ಲಿ, ಈ ವಿಚಾರವಾಗಿ ಎಸ್ಐಟಿ ತನಿಖೆ ನಡೆಸುತ್ತಿದ್ದು, ಸತ್ಯಾಸತ್ಯತೆ ಹೊರಬರುತ್ತೆ, ತಪ್ಪಿತಸ್ಥರಿಗೆ ಖಂಡಿತ ಶಿಕ್ಷೆ ಆಗುತ್ತೆ. ತನಿಖೆ ಪೂತಿ೯ಗೊಂಡಿಲ್ಲದಿದ್ದರೂ ಬಿಜೆಪಿಯವರು ಸಿಎಂ ಜನಪ್ರಿಯತೆ ಕುಗ್ಗಿಸುವ ತಂತ್ರ ಮಾಡಲು ಅವರ ಮೇಲೆ ಆರೋಪ ಹೊರಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

ಮುಡಾ ಹಗರಣ ವಿಚಾರದಲ್ಲಿ ಖಾಸಗಿ ವ್ಯಕ್ತಿಯ ದೂರಿಗೆ ಮನ್ನಣೆ ನೀಡಿ ಸಿಎಂ ಗೆ ರಾಜ್ಯಪಾಲರು ನೋಟಿಸ್ ನೀಡಿರುವ ಕ್ರಮ ಸರಿಯಲ್ಲ. ಅದೇ ರೀತಿ ಕಾಂಗ್ರೆಸ್ ಸಕಾ೯ರ ಜನಪರವಾಗಿ ಆಡಳಿತ ನೀಡೆಸುತ್ತಿದ್ದು, ಈ ವೇಳೆ ನೋಟಿಸ್ ಕ್ರಮ ಸರಿಯಾದುದಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನದಿ ಪಾತ್ರದಲ್ಲಿನ ಗ್ರಾಮಗಳಿಗೆ ಶಾಶ್ವತ ಪರಿಹಾರ:

ನದಿ ಪಾತ್ರದಲ್ಲಿನ ಗ್ರಾಮಗಳಿಗೆ ನೆರೆ ವೇಳೆ ಪ್ರತಿ ವಷ೯ವೂ ಸಹಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಡೆಗೋಡೆ ನಿಮಾ೯ಣಕ್ಕೆ ಮುಖ್ಯಮಂತ್ರಿಗಳ ಜೊತೆ ಚಚೆ೯ನಡೆಸುವೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.

ನಾನು ನದಿಪಾತ್ರದ ಜನರ ಸಮಸ್ಯೆ ಬಗ್ಗೆ ಅವರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೆನೆ. ಹಾನಿಗೊಳಗಾದ ಆಸ್ತಿ, ಮನೆಗಳಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂಬ ವಿಚಾರದಲ್ಲಿ ಸೂಕ್ತ ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದರು.

ಪ್ರತಿ ಬಾರಿ ಮಳೆ ವೇಳೆ 10 ಗ್ರಾಮಗಳಲ್ಲಿ ನೆರೆ ಸಮಸ್ಯೆ ತಲೆದೋರಲಿದೆ. ಹಾಗಾಗಿ ಶಾಶ್ವತ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಕಟಿಬದ್ಧವಾಗುತ್ತೇನೆ ಎಂದರು.

ಎಸ್‌ಐ ಪರಶುರಾಂ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಿಐಡಿ ತನಿಖೆ ನಡೆಸಲಿದೆ ಎಂದರು.

ಕಾಡಾ ಅಧ್ಯಕ್ಷ ಮರಿಸ್ವಾಮಿ, ಉಪವಿಭಾಗಾಧಿಕಾರಿ ಮಹೇಶ್, ತಹಸಿಲ್ದಾರ್ ಮಂಜುಳ, ನಗರಸಭೆ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಚೇತನ್ ದೊರೈರಾಜು, ಯುವ ಮುಖಂಡ ಕಿನಕಹಳ್ಳಿ ರಾಚಯ್ಯ, ರಾಜೇಂದ್ರ, ರಾಜಶೇಖರಮೂರ್ತಿ ಇದ್ದರು.

ಉಟೋಪಚಾರ ಉತ್ತಮ ರೀತಿ ನೀಡಲಾಗುತ್ತಿದೆಯೇ?

ಊಟೋಪಚಾರ ಉತ್ತಮ ರೀತಿಯಲ್ಲಿ ನೀಡಲಾಗುತ್ತಿದೆಯಾ ಎಂದು ನೆರೆ ಸಂತ್ರಸ್ತರನ್ನು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಸಂತ್ರಸ್ತರಿಗೆ ನೀಡಲಾಗುತ್ತಿರುವ ಊಟೋಪಚಾರವನ್ನು ಪರಿಶೀಲಿಸಿದ ಸಂಸದರು, ಸಂತ್ರಸ್ತರನ್ನು ಉತ್ತಮ ರೀತಿಯಲ್ಲಿ ಊಟ, ತಿಂಡಿ ನೀಡಲಾಗುತ್ತಿದೇಯೇ ಎಂದು ಪ್ರಶ್ನಿಸಿದರು.

ಈ ವೇಳೆ ಹಾಜರಿದ್ದ ಸಂತ್ರಸ್ತರು ಊಟೋಪಚಾರ ನೀಡಲಾಗುತ್ತಿದೆ. ಆದರೆ ನಮಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಹಾಗೂ ಶಾಶ್ವತ ಪರಿಹಾರ ಸೂಚಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಸಂಸದರು ಹಳೆ ಅಣಗಳ್ಳಿ, ಹರಳೆ, ಹಳೆ ಹಂಪಾಪುರ, ದಾಸನಪುರ, ಮುಳ್ಳೂರು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ