ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ವ್ಯಂಗ್ಯವಾಡಿದರು.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗ ಬಿಜೆಪಿ ಸರ್ಕಾರ ಅವರನ್ನು ಯಾಕೆ ಬಂಧನ ಮಾಡಲಿಲ್ಲ? ಬಿಜೆಪಿಯವರು ಕೇಸರಿ ಶಾಲು ಹಾಕಿ ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಯಾವುದೇ ಎಫ್ಎಸ್ಎಲ್ ವರದಿ ಅವಶ್ಯಕತೆ ಇಲ್ಲ. ನಾವು ರಾಜಕೀಯ ಮಾಡಬಾರದು ಎಂದು ಸುಮ್ಮನೆ ಇದ್ದೆವು. ಅವರ ಈ ಡೋಂಗಿ ಆಟಗಳನ್ನು ನೋಡಿ ನಮ್ಮ ಸ್ಥಳೀಯ ಶಾಸಕರು ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ.ಕೊಲೆ ಕೊಲೆಯೇ, ಕಳ್ಳತನ ಕಳ್ಳತನವೇ, ನುಡಿಮುತ್ತು ನುಡಿಮುತ್ತೇ ಅಲ್ಲವೇ? ದೇಶದ್ರೋಹ ದೇಶದ್ರೋಹವೇ ಅಲ್ಲವೇ? ನಮ್ಮ ಸರ್ಕಾರದಲ್ಲಿ ಘೋಷಣೆ ಕೂಗಿದವರ ವಿರುದ್ಧ ವಿಚಾರಣೆ ನಡೆಸುತ್ತಿದ್ದೇವೆ. ದೇಶದ ಬಗ್ಗೆ ಬದ್ಧತೆ ನಮಗಿದೆಯೋ? ಬಿಜೆಪಿಯವರಿಗೆ ಇದೆಯಾ? ಎಂದು ತಿರುಗೇಟು ನೀಡಿದರು.
ಮಹದಾಯಿ ಕಾಮಗಾರಿ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರ ನೀಡಬೇಕು. ಮಹದಾಯಿ ಒಪ್ಪಿಗೆ ಸಿಕ್ಕೇ ಬಿಟ್ಟಿತ್ತು ಎಂಬಂತೆ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರಲ್ಲ?. ಆದರೂ ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ? ನಾನು ಸಚಿವನಾದ ನಂತರ ಇದಕ್ಕೆ ಟೆಂಡರ್ ಕರೆಯಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಕೆಲಸ ಆರಂಭವಾಗಲಿದೆ. ಅನುಮತಿ ಕೊಡಿಸಿದರೆ ಅವರಿಗೂ ಒಂದು ಗೌರವ ಎಂದರು.
ಮಾಧ್ಯಮಗಳು ಸುಮ್ಮನಾಗಿವೆ
ಇಡಿ ಪ್ರಕರಣ ರದ್ದು ವಿಚಾರವಾಗಿ ಕೇಳಿದಾಗ, "ಮಾಧ್ಯಮಗಳು ಇಡಿ ದಾಳಿಯಾದಾಗ ಒಂದು ರೀತಿ, ಬಂಧನ ಆದಾಗ ಇನ್ನೊಂದು ರೀತಿ ತೋರಿಸ್ತೀರಿ. ಈಗ ನನ್ನ ವಿರುದ್ಧದ ಪ್ರಕರಣ ರದ್ದಾದ ಮೇಲೆ ಸುಮ್ಮನೇ ಇದ್ದೀರಿ ಅಲಾ ಎಂದು ಪ್ರಶ್ನಿಸಿದರು.ಟಿಕೆಟ್ ನಿರ್ಧಾರ:
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೇಳಿದಾಗ, ಕೇವಲ ಇಬ್ಬರು ಮೂವರಲ್ಲ ಬಿಜೆಪಿಯಿಂದ ಅನೇಕ ಜನ ಕಾಂಗ್ರೆಸ್ ಗೆ ಆಗಮಿಸಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
ಶೆಟ್ಟರ್ ಪಶ್ಚಾತ್ತಾಪಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎಂಬ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ಬಗ್ಗೆ ಕೇಳಿದಾಗ, ಈ ತಿಂಗಳು ಕಳೆದ ಮೇಲೆ ಶೆಟ್ಟರ್ ಅವರಿಂದ ಪಶ್ಚಾತ್ತಾಪದ ಹೇಳಿಕೆ ಹೊರಬರುತ್ತೆ ನೋಡ್ತಾ ಇರಿ ಎಂದರು.