ದೊಡ್ಡಬಳ್ಳಾಪುರ: ಕಳೆದ 24 ಗಂಟೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ತಾಲೂಕುಗಳಲ್ಲೂ ವ್ಯಾಪಕವಾಗಿ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಜನಜೀವನ ಬಾಧಿತವಾಗಿದ್ದು, ಕೆಲವೆಡೆ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿರುವ ಕುರಿತು ವರದಿಯಾಗಿದೆ.
ಮಳೆ ಪರಿಣಾಮ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಚರಂಡಿಗಳು ತುಂಬಿ ರಸ್ತೆಯಲ್ಲಿ ಹರಿಯುತ್ತಿವೆ. ಇಲ್ಲಿನ ಶಾಂತಿನಗರದಲ್ಲಿ ಮ್ಯಾನ್ಹೋಲ್ ತುಂಬಿ ಉಕ್ಕುತ್ತಿದ್ದು, 7ನೇ ಕ್ರಾಸ್ನ ರಸ್ತೆಯೆಲ್ಲಾ ಹೊಲಸುಮಯವಾಗಿದೆ. ಖಾಸ್ಬಾಗ್ ಬಳಿಯ ರೈಲ್ವೇ ಅಂಡರ್ಪಾಸ್ಗಳಲ್ಲಿ ನೀರು ತುಂಬಿ ವಾಹನ ಸಂಚಾರ ಬಾಧಿತವಾಗಿತ್ತು. ತಾಲೂಕು ಕಚೇರಿ ವೃತ್ತ, ಮುಕ್ತಾಂಬಿಕಾ ರಸ್ತೆ, ಕೊಂಗಾಡಿಯಪ್ಪ ಕಾಲೇಜು ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿದ ಪರಿಣಾಮ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.
ತಾಲೂಕಿನ ದೊಡ್ಡಬೆಳವಂಗಲ, ಮಧುರೆ, ಸಾಸಲು, ತೂಬಗೆರೆ ಹಾಗೂ ಕಸಬಾ ಹೋಬಳಿಗಳ ಎಲ್ಲೆಡೆ ಮಳೆಯಾಗಿದೆ. ಭಾನುವಾರ ರಾತ್ರಿ ಆರಂಭವಾದ ಮಳೆ 8 ಗಂಟೆಗಳ ಕಾಲ ನಿರಂತರವಾಗಿ ಸುರಿದಿದೆ. ಸೋಮವಾರ ಬೆಳಗ್ಗೆ 9 ಗಂಟೆವರೆಗೆ ಜಡಿಮಳೆ ಮುಂದುವರೆದಿತ್ತು.ತಾಲೂಕಿನ ರಾಜಘಟ್ಟ ಕೆರೆ ಏರಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಗುಂಡಿಗಳಲ್ಲಿ ಮಳೆ ನೀರು ತುಂಬಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಹೋಬಳಿಗಳಲ್ಲೂ ವ್ಯಾಪಕ ಮಳೆ:
ಮುಂದಿನ 3 ದಿನ ಮಳೆ ಮುನ್ನೆಚ್ಚರಿಕೆ:
ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಮಾರ್ಗಸೂಚಿ:
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಕೃಷಿಕರು ಮಳೆ, ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬಡಿಯುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು ಎಂದು ತಿಳಿಸಿದ್ದು, ಈ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.
ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ 1077 ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ- 080-28388005 ಕರೆ ಮಾಡಿ. ಅಥವಾ ಆಯಾ ತಾಲ್ಲೂಕು ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ನಿರಂತರ ಮಳೆ ಪರಿಣಾಮ ಕೆಸರುಗದ್ದೆಯಾಗಿ ಮಾರ್ಪಟ್ಟಿದೆ.
--19ಕೆಡಿಬಿಪಿ6- ದೊಡ್ಡಬಳ್ಳಾಪುರ ನಗರದಲ್ಲಿ ವ್ಯಾಪಕ ಮಳೆಗೆ ಜನಜೀವನ ಅಸ್ತವ್ಯಸ್ತ.
--19ಕೆಡಿಬಿಪಿ7- ವ್ಯಾಪಕ ಜಡಿ ಮಳೆಗೆ ಜನಜೀವನ ತತ್ತರ.
--19ಕೆಡಿಬಿಪಿ8-
ಜಡಿಮಳೆ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು ಬಾಧಿತ.