ಬಲವಂತವಾಗಿ ಮತಾಂತರಕ್ಕೆ ಯತ್ನಿಸಿ ಪತ್ನಿ, ಅತ್ತೆಗೆ ಮಾರಣಾಂತಿಕ ಹಲ್ಲೆ: ಖಂಡನೆ

KannadaprabhaNewsNetwork |  
Published : Apr 16, 2025, 12:38 AM IST
15ಕೆಎಂಎನ್ ಡಿ28 | Kannada Prabha

ಸಾರಾಂಶ

ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದೆಡೆ ಮುಸ್ಲಿಂರ ಬಳಿಕ, ಕ್ರಿಶ್ಚಿಯನ್ ಮಿಷನರಿಗಳು ಮತಾಂತರವಾದರೆ ಲಕ್ಷ ಲಕ್ಷ ಹಣ ಕೊಡುವುದಾಗಿ ಆಮಿಷ ನೀಡುವ ಆರೋಪ ಕೇಳಿಬರುತ್ತಿದೆ. ಜೊತೆಗೆ ತಾಲೂಕಿನ ವಿವಿಧೆಡೆ ಗ್ರಾಮಗಳು, ಮನೆಗಳು, ಚರ್ಚ್‌ಗಳಲ್ಲಿ ಮಿಷನರಿಗಳ ಮೂಲಕ ಆಮಿಷಗಳ ಒಡ್ಡಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬಲವಂತದ ಮತಾಂತರಕ್ಕೆ ಯತ್ನಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಖಂಡಿಸಿ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ಮುಖಂಡರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಸೇರಿದ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದವರ ವಿರುದ್ಧ ಘೋಷಣೆಗಳ ಕೂಗಿದರು. ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಹೆದ್ದಾರಿ ತಡೆ ಮಾಡಿ ಇಂತಹ ಮತಾಂತರ ಪ್ರಕರಣಗಳಿಗೆ ಸರ್ಕಾರ ಒತ್ತು ನೀಡದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಪಟ್ಟಣದ ಮುಖ್ಯ ರಸ್ತೆಯ ಮೂಲಕ ಹಿಂದು ಪರ ಧ್ವಜಗಳ ಹಿಡಿದು ಜಾಥಾ ನಡೆಸಿದ ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಧರಣಿ ನಡೆಸಿ ಮತಾಂತರದ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದೆಡೆ ಮುಸ್ಲಿಂರ ಬಳಿಕ, ಕ್ರಿಶ್ಚಿಯನ್ ಮಿಷನರಿಗಳು ಮತಾಂತರವಾದರೆ ಲಕ್ಷ ಲಕ್ಷ ಹಣ ಕೊಡುವುದಾಗಿ ಆಮಿಷ ನೀಡುವ ಆರೋಪ ಕೇಳಿಬರುತ್ತಿದೆ. ಜೊತೆಗೆ ತಾಲೂಕಿನ ವಿವಿಧೆಡೆ ಗ್ರಾಮಗಳು, ಮನೆಗಳು, ಚರ್ಚ್‌ಗಳಲ್ಲಿ ಮಿಷನರಿಗಳ ಮೂಲಕ ಆಮಿಷಗಳ ಒಡ್ಡಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ. ಇಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ದಿನೇ ದಿನೇ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಹಾಗೂ ತಾಲೂಕು ಆಡಳಿತ ಕೂಡಲೇ ಇದಕ್ಕೆಲ್ಲಾ ಕಡಿವಾಣ ಹಾಕಬೇಕು. ತಪ್ಪಿತಸ್ಥರು ಜೈಲು ಸೇರುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ:

ಮತಾಂತರದ ವಿರುದ್ಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಟ್ಟಣದ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕುವೆಂಪು ವೃತ್ತದಿಂದ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ಧಿಡೀರ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಠಾಣೆ ಎದುರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದರು. ನಂತರ ಠಾಣೆ ಎದುರು ಧರಣಿ ಕುಳಿತು ಪ್ರತಿಭಟಿಸಿದರು.

ಹಿಂದೂ ಸಂಘಟನೆಗಳು ಇಲ್ಲ ಅಂದರೆ ನೀವು ಯೂನಿಫಾರಂ ಹಾಕ್ತಿರಲಿಲ್ಲ. ನಿಮಗೆಲ್ಲ ಮುಂಜಿ ಮಾಡಿ ಟೋಪಿ ಹಾಕುತ್ತಿದ್ದರು. ನಾವೆಲ್ಲಾ ಹಿಂದೂಗಳು ಸಂಸ್ಕಾರವಂತರು. ನೂರಾರು ವರ್ಷಗಳಿಂದ ಸಂಘಟನೆ ಮಾಡುತ್ತಾ ನಿಮ್ಮ ಪರ ಇದ್ದೀವಿ ಎಂದು ಮತಾಂತರಿಗಳ ಬಂಧನ ಬಗ್ಗೆ ಉಡಾಫೆ ಉತ್ತರ ಕೊಟ್ಟ ಡಿವೈಎಸ್ಪಿ ಶಾಂತಮಲ್ಲಪ್ಪ ಅವರನ್ನು ತರಾಟೆ ತೆಗೆದುಕೊಂಡರು.

ನಂತರ ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಕೈಬಿಟ್ಟರು. ಪ್ರತಿಭಟನೆ ವೇಳೆ ಪೊಲೀಸರು ಬಿಗಿಬಂದೋಬಸ್ತ್ ವಹಿಸಿದ್ದರು.

ಈ ವೇಳೆ ಹಿಂದು ಜಾಗರಣ ವೇದಿಕೆಯ ಬಾಲು, ವಿಶ್ವ ಹಿಂದೂಪರಿಷತ್ ಸಂಘಟನೆ ಬೆಳಗೊಳ ಸುನೀಲ್ ಸೇರಿದಂತೆ ಇತರ ಹಿಂದು ಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ಗೆ ವಾರ್ಷಿಕ ಆದಾಯ ₹5 ಲಕ್ಷಕ್ಕೆ ಹೆಚ್ಚಿಸಿ
ರಾಜ್ಯ ಲಕ್ಷಾಂತರ ಅಕ್ರಮ ವಿದೇಶಿ ವಲಸಿಗರ ನೆಲೆ!