ಕಾಡಾನೆ ದಾಳಿ: ಕೃಷಿ ಫಸಲು ನಾಶ

KannadaprabhaNewsNetwork |  
Published : Jul 13, 2025, 01:18 AM IST
ತಿವಿದು | Kannada Prabha

ಸಾರಾಂಶ

ಉಲುಗುಲಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಫಸಲನ್ನು ಹಾಳುಗೆಡವಿದೆ.

ಸುಂಟಿಕೊಪ್ಪ: ಪಟ್ಟಣದ ಅಂಚಿನಲ್ಲಿರುವ ಉಲುಗುಲಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಫಸಲನ್ನು ಹಾಳುಗೆಡವಿದೆ. ಶುಕ್ರವಾರ ರಾತ್ರಿ ತೋಟಕ್ಕೆ ಲಗ್ಗೆಯಿಟ್ಟ ಈ ಕಾಡಾನೆಗಳು ಕಾಫಿ ತೆಂಗು ಅಡಿಕೆ ಜೇನುಪೆಟ್ಟಿಗೆ ಗಿಡಗಳನ್ನು ತುಳಿದು ಧ್ವಂಸಗೊಳಿಸಿದೆ. ತೋಟದಲ್ಲಿದ್ದ ಸಿಂಟೆಕ್ಸ್ ನೀರಿನ ಟ್ಯಾಂಕ್ ಅನ್ನು ಕೊರೆಯಿಂದ ತಿವಿದು ಹಾನಿಗೊಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ತೋಟದ ವ್ಯವಸ್ಥಾಪಕ ಅಬ್ಧುಲ್ ಸಲಾಂ ಕಳೆದ ಹಲವು ದಿನಗಳಿಂದ ಕಾಡಾನೆಗಳು ಈ ವ್ಯಾಪ್ತಿಯಲ್ಲಿ ಸಂಚರಿಸುತ್ತಿದೆ. ಕೃಷಿ ಫಸಲು ಮಾತ್ರವಲ್ಲ ಜನರ ಪ್ರಾಣಕ್ಕೂ ಅಪಾಯ ತಂದೊಡ್ಡುವುದರಲ್ಲಿ ಸಂದೇಹವಿಲ್ಲ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ