ಕುಡುವಾಳೆ ಗ್ರಾಮದಲ್ಲಿ ಕಾಡಾನೆ ದಾಳಿ ಬೆಳೆ ನಾಶ

KannadaprabhaNewsNetwork |  
Published : Feb 12, 2026, 01:45 AM IST
ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಾಳೆ ಗ್ರಾಮದಲ್ಲಿ ಕಾಡಾನೆಯೊಂದು ಜಮೀನಿಗೆ ನುಗ್ಗಿರುವುದು. | Kannada Prabha

ಸಾರಾಂಶ

ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಾಳೆ ಗ್ರಾಮದಲ್ಲಿ ಕಾಡಾನೆಯೊಂದು ಜಮೀನಿಗೆ ನುಗ್ಗಿ ಬೆಳೆದಿದ್ದ ಬೆಳೆಗಳನ್ನು ನಾಶಪಡಿಸಲು ಯತ್ನಿಸಿದ ಹಿನ್ನಲೆ ರೈತರು ರಾತ್ರಿ ಪೂರ್ತಿ ನಿದ್ದೆಗೆಟ್ಟು ಆನೆ ಓಡಿಸಿದ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಾಳೆ ಗ್ರಾಮದಲ್ಲಿ ಕಾಡಾನೆಯೊಂದು ಜಮೀನಿಗೆ ನುಗ್ಗಿ ಬೆಳೆದಿದ್ದ ಬೆಳೆಗಳನ್ನು ನಾಶಪಡಿಸಲು ಯತ್ನಿಸಿದ ಹಿನ್ನಲೆ ರೈತರು ರಾತ್ರಿ ಪೂರ್ತಿ ನಿದ್ದೆಗೆಟ್ಟು ಆನೆ ಓಡಿಸಿದ ಘಟನೆ ನಡೆದಿದೆ.

ತಾಲೂಕಿನ ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಕುಡುವಾಳೆ ಗ್ರಾಮದ ಸರ್ವೇ ನಂ. 251ರಲ್ಲಿ ಸಿದ್ದಶೆಟ್ಟಿ ಎಂಬವರು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದು ವಿವಿಧ ಫಸಲನ್ನು ಬೆಳದಿದ್ದಾರೆ. ಸಮೀಪದ ಅರಣ್ಯ ಪ್ರದೇಶದಿಂದ ಬಂದ ಬೃಹತ್ ಗಾತ್ರದ ಕಾಡಾನೆ ಜಮೀನಿಗೆ ನುಗ್ಗಿ ಬೆಳೆದಿದ್ದ ಮುಸ್ಕಿನ ಜೋಳ ಸೇರಿದಂತೆ ವಿವಿಧ ಫಸಲನ್ನು ತಿಂದು ತುಳಿದು ನಾಶಪಡಿಸಲು ಮುಂದಾಗಿದ್ದನ್ನು ಗಮನಿಸಿದ ಸ್ಥಳೀಯ ರೈತರು ಬ್ಯಾಟರಿ ಲೈಟ್‌ಗಳು ಹಾಗೂ ಪಟಾಕಿಗಳನ್ನು ಬಳಸಿಕೊಂಡು ಕಾಡಾನೆಯನ್ನು ಮರಳಿ ಅರಣ್ಯಕ್ಕೆ ಓಡಿಸಲು ರಾತ್ರಿ ಪೂರ್ತಿ ಹರಸಾಹಸ ಪಟ್ಟರು. ಆನೆಯ ದಾಳಿಯಿಂದ ಬೆಳೆ ಹಾನಿಯಾಗುವ ಭೀತಿಯಿಂದ ರೈತರು ನಿತ್ಯವು ಕಾವಲು ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಮರಾಜನಗರಕ್ಕೆ ವಿವಿಧ ರೈಲ್ವೆ ಬೇಡಿಕೆಗಳಿಗೆ ಪ್ರಭಾಕರ್‌ ಆಗ್ರಹ
ವಿದ್ಯಾರ್ಥಿನಿ ಆತ್ಮಹತ್ಯೆ: ಬಿಇಒ ಅಮಾನತಿಗೆ ಆಗ್ರಹ