ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಐದು ಕಾಡಾನೆಗಳ ಹಿಂಡು ನುಗ್ಗಿ ವ್ಯಾಪಕ ಹಾನಿ ಉಂಟುಮಾಡಿದೆ.
ಸೋಮವಾರಪೇಟೆ: ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಐದು ಕಾಡಾನೆಗಳ ಹಿಂಡು ನುಗ್ಗಿ ವ್ಯಾಪಕ ಹಾನಿ ಉಂಟುಮಾಡಿದೆ.
ಮಂಗಳವಾರ ತಡರಾತ್ರಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು ಮಾಜಿ ಸಚಿವರ ತೋಟದ ಪ್ರವೇಶ ದ್ವಾರದ ಗೇಟ್ಗಳನ್ನು ಧ್ವಂಸಗೊಳಿಸಿವೆ. ಗೇಟ್ನ ಕಬ್ಬಿಣದ ಕಂಬಗಳು ಹಾಗೂ ಪಿಲ್ಲರ್ಗಳನ್ನು ಉರುಳಿಸಿ, ಕಬ್ಬಿಣದ ಗೇಟ್ಗಳನ್ನು ತುಳಿದು ಒಳನುಗ್ಗಿದ ಆನೆಗಳು ಹಲವು ಕಾಫಿ ಗಿಡಗಳನ್ನು ಕಿತ್ತು ನಾಶಪಡಿಸಿವೆ. ಇದರಿಂದ ತೋಟಕ್ಕೆ ಗಮನಾರ್ಹ ಪ್ರಮಾಣದ ಹಾನಿಯಾಗಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಡನಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.