ಕಾಡಾನೆ ಹಾವಳಿ: ಸಚಿವ ಎಚ್‌ಡಿಕೆಗೆ ಮಾಜಿ ಶಾಸಕ ವಿಶ್ವನಾಥ್‌ ಮನವಿ

KannadaprabhaNewsNetwork |  
Published : Mar 26, 2026, 01:45 AM IST
25ಎಚ್ಎಸ್ಎನ್13 :  | Kannada Prabha

ಸಾರಾಂಶ

ವಿಶ್ವನಾಥ್ ಅವರ ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಶೀಘ್ರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಕಾಡಾನೆ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಕರೆತಂದು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡಪ್ರಭವಾರ್ತೆ, ಸಕಲೇಶಪುರ

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ದೆಹಲಿಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಮತ್ತು ಕಾರ್ಮಿಕರು ನಿತ್ಯ ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಜೀವಹಾನಿ ಮತ್ತು ಬೆಳೆಹಾನಿ ತಡೆಗಟ್ಟಲು ಶ್ರೀಲಂಕಾ ಮಾದರಿಯಲ್ಲಿ ವೈಜ್ಞಾನಿಕ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

​ವಿಶ್ವನಾಥ್ ಅವರ ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಶೀಘ್ರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಕಾಡಾನೆ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಕರೆತಂದು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲೂಕುಗಳಲ್ಲಿ ತೀವ್ರವಾಗಿರುವ ಆನೆ ಹಾವಳಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇನೆ. ಆನೆಗಳನ್ನು ನಿಯಂತ್ರಿಸಲು ಶ್ರೀಲಂಕಾದಲ್ಲಿ ಯಶಸ್ವಿಯಾಗಿರುವ ಬಲಿಷ್ಠ ವಿದ್ಯುತ್ ಬೇಲಿ ಮತ್ತು ಸಮುದಾಯ ಆಧಾರಿತ ನಿರ್ವಹಣಾ ಪದ್ಧತಿ ನಮ್ಮಲ್ಲೂ ಅಳವಡಿಸಿದರೆ ಸಮಸ್ಯೆ ಬಗೆಹರಿಯುವ ನೀರಿಕ್ಷೆ ಇದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಯ್ದೆ ಜಾರಿ ವಿರೋಧಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ
ಕಾಡಾನೆ ಹಾವಳಿ ಶಾಶ್ವತ ತಡೆಗೆ ಒತ್ತಾಯ; ಪ್ಲಾಂಟರ್ಸ್ ಸಂಘದ ನಿಯೋಗದಿಂದ ಕೇಂದ್ರ ಸರ್ಕಾರಕ್ಕೆ ಮನವಿ