ಕನಕಪುರ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಹಾವಳಿ

KannadaprabhaNewsNetwork |  
Published : Sep 09, 2025, 01:00 AM IST
ಕೆ ಕೆ ಪಿ ಸುದ್ದಿ 04: | Kannada Prabha

ಸಾರಾಂಶ

ಕನಕಪುರ: ತಾಲೂಕಿನ ಕೂನೂರು ಗ್ರಾಮದಲ್ಲಿ ರೈತ ವೀರಪ್ಪ ಭತ್ತದ ಬೆಳೆ ನಾಶ. ತಡರಾತ್ರಿ ಜಮೀನಿಗೆ ನುಗ್ಗಿ ಬೆಳೆ ತಿಂದು ನಾಶ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಕನಕಪುರ: ತಾಲೂಕಿನ ಕೂನೂರು ಗ್ರಾಮದಲ್ಲಿ ರೈತ ವೀರಪ್ಪ ಭತ್ತದ ಬೆಳೆ ನಾಶ. ತಡರಾತ್ರಿ ಜಮೀನಿಗೆ ನುಗ್ಗಿ ಬೆಳೆ ತಿಂದು ನಾಶ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಭಾನುವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆ ತೋಟದ ಮನೆ ಗೋಡೆ ಕೆಡವಿ, ಭತ್ತದ ಮೂಟೆಗಳ ತುಳಿದು ದಾಂಧಲೆ ಮಾಡಿದೆ. ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಗ್ರಾಮದ ಸುತ್ತ- ಮುತ್ತ ನಿರಂತರವಾಗಿ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಕಾಡಾನೆ ಹಾವಳಿಗೆ ಗ್ರಾಮಸ್ಥರು ಕಂಗಲಾಗಿದ್ದು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಡಾನೆಗಳ ದಾಳಿಯಿಂದ ಆಗುತ್ತಿರುವ ನಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಎಸಿಎಫ್‌ ಜಗದೀಶ್ ಸೇರಿದಂತೆ ಹಲವು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ