ಅರೇಹಳ್ಳಿ ಹೋಬಳಿಯಲ್ಲಿ ಕಾಡಾನೆಗಳ ಹಿಂಡು

KannadaprabhaNewsNetwork |  
Published : Aug 19, 2024, 12:55 AM IST
18ಎಚ್ಎಸ್ಎನ್18 :  | Kannada Prabha

ಸಾರಾಂಶ

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳಿಂದ ಬಸವಳಿದ ರೈತರು ಹಾಗೂ ಕಾಫಿ ಬೆಳೆಗಾರರು ಬೇರೆಡೆಗೆ ಆನೆಗಳನ್ನು ಓಡಿಸುವ ಕಾಯಕದಲ್ಲಿ ನಿರತರಾಗಿರುವುದು ಸಾಮಾನ್ಯವಾಗಿದೆ. ಈ ನಡುವೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ದಾಟುವ ಆನೆಗಳನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡಿದ್ದಾರೆ. ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರು-ಹೈದ್ರಾಬಾದ್‌ ಹೈಸ್ಪೀಡ್‌ ರೈಲಿಗೆ ಒಪ್ಪಿಗೆ?
ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’