ಕೃಷ್ಣ ಎನ್. ಲಮಾಣಿ
ನೋಡುತ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ಜೂ.೨೧ರಂದು ಕೆಡಿಪಿ ಸಭೆ ನಡೆಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹಾಗಾಗಿ ರೈತರು ತಮ್ಮ ಪ್ರಮುಖ ಬೇಡಿಕೆ ಈಡೇರಿಸುವರೇ ಎಂದು ಮುಖ್ಯಮಂತ್ರಿಯತ್ತ ಆಶಯದೊಂದಿಗೆ ನೋಡುತ್ತಿದ್ದಾರೆ. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಬೆನಕಾಪುರ, ಕಾಳಘಟ್ಟ ಪ್ರದೇಶದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ 77 ಎಕರೆ ಜಾಗ ಗುರುತಿಸಲಾಗಿದೆ. ಹಿಂದಿನ ಸರ್ಕಾರ ಹಂಪಿ ಶುಗರ್ಸ್ ಕಾರ್ಖಾನೆ ಸ್ಥಾಪನೆಗೆ ಮುಂದಾಗಿತ್ತು. ಜಾಗದ ವಿವಾದದಿಂದ ಕಾರ್ಖಾನೆ ಭೂಮಿಪೂಜೆ ನೆರವೇರಿಲ್ಲ. ಈಗ ಹೊಸ ಜಾಗ ಗುರುತಿಸಲಾಗಿದ್ದು, ಯಾರು ಕಾರ್ಖಾನೆ ಸ್ಥಾಪನೆ ಮಾಡಲಿದ್ದಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ. ಕೆಡಿಪಿ ಸಭೆಗೆ ಸ್ವತಃ ಸಿಎಂ ಆಗಮಿಸುತ್ತಿರುವುದರಿಂದ ಈ ಭಾಗದ ರೈತರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಮುನ್ನೆಲೆಗೆ ಬಂದಿದೆ.
4 ಲಕ್ಷಕ್ಕೂ ಅಧಿಕ ಟನ್ ಕಬ್ಬು ಉತ್ಪಾದನೆ:ಹೊಸಪೇಟೆಯ ಚಿತ್ತವಾಡ್ಗಿ ಭಾಗದಲ್ಲಿ ಈ ಹಿಂದಿನಿಂದಲೂ ಐಎಸ್ಆರ್ ಸಕ್ಕರೆ ಸ್ಥಾಪನೆ ಮಾಡಲಾಗಿತ್ತು. ಈ ಕಾರ್ಖಾನೆ ಸಂಕಷ್ಟದಲ್ಲಿದ್ದಾಗ ಈ ಹಿಂದೆ ರೈತರು ಸಹಾಯ ಮಾಡಿದ್ದರು. ಆದರೆ, ಕಾರ್ಖಾನೆ 2014-15ನೇ ಸಾಲಿನಲ್ಲಿ ಸ್ಥಗಿತಗೊಂಡಿತು. ಆಗಿನಿಂದಲೂ ರೈತರು ಬೆಳೆದ ಕಬ್ಬು ಬೆಳೆಗೆ ಉತ್ತಮ ಬೆಲೆ ದೊರೆಯದೇ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಭಾಗದಲ್ಲಿ 4ಲಕ್ಷಕ್ಕೂ ಅಧಿಕ ಟನ್ ಕಬ್ಬು ಬೆಳೆಯಲಾಗುತ್ತದೆ. ಹೊರ ಜಿಲ್ಲೆಯ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವಂತಾಗಿದೆ. ಈಗ ಸಿಎಂ ಕಬ್ಬು ಬೆಳೆಯುವ ರೈತರಿಗೆ ಆಸರೆಯಾಗಲಿ. ಈ ಕುರಿತು ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸುತ್ತಾರೆ ರೈತ ಹನುಮಂತಪ್ಪ.
ಹೊಸಪೇಟೆ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಿದರೆ ರೈತರು, ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರಿಗೂ ಅನುಕೂಲ ಆಗಲಿದೆ. ಈಗ ರೈತರು ಕಡಿಮೆ ಬೆಲೆಗೆ ಹೊರ ಜಿಲ್ಲೆಯ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವಂತಾಗಿದೆ. ಜಿಲ್ಲೆಗೆ ಆಗಮಿಸುತ್ತಿರುವ ಸಿಎಂ ರೈತರಿಗೆ ಸಿಹಿ ಸುದ್ದಿ ನೀಡಲಿ ಎನ್ನುತ್ತಾರೆ ಹೊಸಪೇಟೆ ರೈತರ ಸಂಘದ ಅಧ್ಯಕ್ಷ ಕಟಗಿ ಜಂಬಯ್ಯ ನಾಯಕ.