ಕನ್ನಡ ಹೋರಾಟಗಾರರ ಕೇಸ್‌ ಕುರಿತು ಪರಿಶೀಲನೆ : ಡಾ। ಪರಂ

KannadaprabhaNewsNetwork |  
Published : Nov 10, 2025, 03:00 AM ISTUpdated : Nov 10, 2025, 06:26 AM IST
Dr G Parameshwar

ಸಾರಾಂಶ

ರೈತ ಪರ, ಕನ್ನಡಪರ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ಹೋರಾಟ ಮಾಡಿದ ಸಂದರ್ಭದಲ್ಲಿ ಗುರುತರವಾದ ಯಾವುದೇ ಆರೋಪಗಳು ಇಲ್ಲದಿದ್ದರೆ ಅಂತಹ ಕೇಸುಗಳನ್ನು ಚರ್ಚೆ ಮಾಡಿ ವಾಪಸ್‌ ಪಡೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

  ಬೆಂಗಳೂರು

ರೈತ ಪರ, ಕನ್ನಡಪರ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ಹೋರಾಟ ಮಾಡಿದ ಸಂದರ್ಭದಲ್ಲಿ ಗುರುತರವಾದ ಯಾವುದೇ ಆರೋಪಗಳು ಇಲ್ಲದಿದ್ದರೆ ಅಂತಹ ಕೇಸುಗಳನ್ನು ಚರ್ಚೆ ಮಾಡಿ ವಾಪಸ್‌ ಪಡೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕೇಸುಗಳನ್ನು ಹಿಂಪಡೆಯಬೇಕೆಂಬ ‘ಕನ್ನಡಪ್ರಭ’ ಸರಣಿ ಅಭಿಯಾನ

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಕೇಸುಗಳನ್ನು ಹಿಂಪಡೆಯಬೇಕೆಂಬ ‘ಕನ್ನಡಪ್ರಭ’ ಸರಣಿ ಅಭಿಯಾನದ ಕುರಿತು ಭಾನುವಾರ ಪ್ರತಿಕ್ರಿಯಿಸಿರುವ ಅವರು, ಯಾರು ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿರುತ್ತಾರೋ ಅಂತಹವರ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಕನ್ನಡಪರ, ರೈತಪರ ಸಂಘಟನೆಗಳು ಸೇರಿದಂತೆ ಯಾವುದೇ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ಹೋರಾಟ ಮಾಡಿದ ಸಂದರ್ಭದಲ್ಲಿ ಕೇಸು ದಾಖಲಾಗಿದ್ದರೆ, ಅವುಗಳನ್ನು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ಮಾಡಲಾಗಿದೆ. 

ಪರಿಶೀಲಿಸಿ ಸಮಿತಿ ವರದಿ

ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸು ಹಾಕಿದ್ದರೆ, ಅವುಗಳನ್ನು ಪರಿಶೀಲಿಸಿ ಸಮಿತಿ ವರದಿ ನೀಡುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯವಿದ್ದರೆ ಕೇಸು ವಾಪಸ್‌ ತೆಗೆದುಕೊಳ್ಳಲಾಗುವುದು ಎಂದರು.ಈಗ ಅರ್ಜಿ ನೀಡಿದರೆ ನಾಳೆಯೇ ವಾಪಸ್‌ ತೆಗೆದುಕೊಳ್ಳಲು ಆಗುವುದಿಲ್ಲ. ಎಲ್ಲವನ್ನೂ ಕೂಲಂಕಷವಾಗಿ ಚರ್ಚಿಸಿ, ಪರಿಶೀಲಿಸಿ, ಕ್ಯಾಬಿನೆಟ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಯಾವು ಕಾನೂನು ವಿರುದ್ಧವಾಗಿ ಕೆಲಸ ಮಾಡಿರುತ್ತಾರೋ ಅವರ ಮೇಲೆ ಕ್ರಮ ಆಗಲಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ