ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ಡಾ.ಪ್ರಭಾ ಮಲ್ಲಿಕಾರ್ಜುನ

KannadaprabhaNewsNetwork |  
Published : Mar 31, 2024, 02:00 AM IST
ಹರಪನಹಳ್ಳಿ ಪಟ್ಟಣದ ತರಳ ಬಾಳು ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಾಯಿತು. ಶಾಸಕಿ ಎಂ.ಪಿ.ಲತಾ ಹಾಗೂ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ  ಇದ್ದರು. | Kannada Prabha

ಸಾರಾಂಶ

ನಮ್ಮ ಮನೆ, ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ನಾನು, ನಮ್ಮ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್‌.ಎಸ್‌. ಮಲ್ಲಿಕಾರ್ಜುನರಿಂದ ಸಮಾಜಸೇವೆ ಸಾಕಷ್ಟು ಕಲಿತಿದ್ದೇನೆ.

ಹರಪನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಮತ ಹಾಕಿ ಗೆಲ್ಲಿಸಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮತದಾರರಿಗೆ ಕೋರಿದರು.

ಅವರು ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಶನಿವಾರ ಮಾತನಾಡಿದರು.

ನಮ್ಮ ಮನೆ, ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ನಾನು, ನಮ್ಮ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್‌.ಎಸ್‌. ಮಲ್ಲಿಕಾರ್ಜುನರಿಂದ ಸಮಾಜಸೇವೆ ಸಾಕಷ್ಟು ಕಲಿತಿದ್ದೇನೆ ಎಂದು ಹೇಳಿದರು.

ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಿದೆ. ಬರ ಅನುದಾನ ನಮ್ಮ ರಾಜ್ಯಕ್ಕೆ ನೀಡಿಲ್ಲ ಎಂದು ದೂರಿದರು. ನನಗೆ ಮತಹಾಕಿ ಗೆಲ್ಲಿಸಿದರೆ ತ್ರಿಬಲ್‌ ಎಂಜಿನ್‌ ಸರ್ಕಾರವಾಗುತ್ತದೆ. ಇಲ್ಲಿ ಎಂ.ಪಿ. ಲತಾ ಶಾಸಕರಿದ್ದಾರೆ. ದಾವಣಗೆರೆಯಲ್ಲಿ ಸಚಿವ ಮಲ್ಲಿಕಾರ್ಜುನ ಇದ್ದಾರೆ, ನಾನು ಗೆದ್ದರೂ ಮೂರನೇ ಇಂಜಿನ್ ಆಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಎಂದು ಕಾರ್ಯಕರ್ತರಿಗೆ ಹೇಳಿದರು.

ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಮತ ಹಾಕಿ ನಂತರ ಕೆಲಸ ಕೇಳಿ, ಪಕ್ಷದ ಕೆಲಸ ಹಾಗೂ ನೀವು ಹೇಳಿದ ಕೆಲಸ ಮಾಡುತ್ತೇನೆ. ತಾಳ್ಮೆ ಇರಲಿ ಎಂದರು.

ಈಗಾಗಲೇ ಹರಪನಹಳ್ಳಿ ಕ್ಷೇತ್ರಕ್ಕೆ ನಾನು ಸಾಕಷ್ಟು ಅನುದಾನ ತಂದಿದ್ದೇನೆ. ಜೂನ್‌ ತಿಂಗಳಲ್ಲಿ ಇನ್ನು ₹100 ಕೋಟಿ ಅನುದಾನ ಬರುತ್ತೆ. ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಮಾತನಾಡಿ, ಕಾಂಗ್ರೆಸ್‌ ಪಕ್ಷ 371 ಜೆ ಕೊಡಿಸಿದ್ದು ಸೇರಿದಂತೆ ಹರಪನಹಳ್ಳಿ ಅಭಿವೃದ್ಧಿಗೆ ಶ್ರಮಿಸಿದೆ. ಎಂ.ಪಿ. ಲತಾ ಹಾಗೂ ಡಾ.ಪ್ರಭಾ ಅಕ್ಕ ತಂಗಿಯರಂತೆ ಕೆಲಸ ಮಾಡುತ್ತಾರೆ. ಪ್ರತಿ ಹಳ್ಳಿ, ಪ್ರತಿ ಪಂಚಾಯ್ತಿಯಲ್ಲೂ ಕಾಂಗ್ರೆಸ್ ಜೀವಂತವಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಎಂದು ಕೋರಿದರು.

ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್‌ ಶೇಕ್, ಹಿರಿಯ ಕಾಂಗ್ರೆಸ್‌ ಮುಖಂಡ ಸಿ.ಚಂದ್ರಶೇಖರ ಭಟ್ ಮಾತನಾಡಿದರು.

ಮುಖಂಡರಾದ ಪಿ.ಮಹಾಬಲೇಶ್ವರಗೌಡ, ಡಿ.ಬಸವರಾಜ, ವೈ.ಕೆ.ಬಿ. ದುರುಗಪ್ಪ, ಎಂ.ರಾಜಶೇಖರ, ಅಬ್ದುಲ್‌ ರಹಿಮಾನ್, ಕೋಡಿಹಳ್ಳಿ ಭೀಮಣ್ಣ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಇದ್ದರು. ಜೆಡಿಎಸ್‌ ಪಕ್ಷದ ಕೂಡ್ಲಿಗಿ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕೋಡಿಹಳ್ಳಿ ಭೀಮಪ್ಪ, ತಾಪಂ ಮಾಜಿ ಸದಸ್ಯ ವೆಂಕಟೇಶರೆಡ್ಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಚಿಗಟೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕುಬೇರಪ್ಪ, ಕಂಬತ್ತಹಳ್ಳಿ ಮಂಜುನಾಥ,ತಾವರಗೊಂದಿ ಜಯಪ್ರಕಾಶ, ಆಲದಹಳ್ಳಿ ಷಣ್ಮೂಖಪ್ಪ, ಮಹಿಳಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳಾದ ಕಂಚಿಕೇರಿ ಜಯಲಕ್ಷ್ಮಿ, ಬಾಗ್ಯಮ್ಮ, ಮುಖಂಡರಾದ ಬಿ.ಕೆ.ಪ್ರಕಾಶ, ಎಚ್‌.ಎಂ.ಮಲ್ಲಿಕಾರ್ಜುನ, ಬಿ.ಆರ್.ಕೃಷ್ಣನಾಯ್ಕ, ಹುಲ್ಲಿಕಟ್ಟಿ ಚಂದ್ರಪ್ಪ, ಮೈದೂರು ರಾಮಣ್ಣ, ಪುರಸಭಾ ಸದಸ್ಯರುಗಳಾದ ಲಾಟಿದಾದಾಪೀರ, ಗೊಂಗಡಿ ನಾಗರಾಜ, ಟಿ.ವೆಂಕಟೇಶ, ಉದ್ದಾರ ಗಣೇಶ, ಮುಖಂಡರಾದ ಬಂಡ್ರಿ ಗೋಣಿಬಸಪ್ಪ, ಬಿ.ಬಿ.ಹೊಸೂರಪ್ಪ, ಡಾ.ಕೆ.ಬಿ.ಕೊಟ್ರೇಶ,ವಗ್ಗಾಲಿ ನಜೀರ, ಉದಯಶಂಕರ, ಹಾಲೇಶಗೌಡ, ಆಮ್‌ ಆದ್ಮಿ ಪಕ್ಷದ ಹೊಸಕೋಟಿ ನಾಗರಾಜ, ಬಿ.ವೈ.ಕಾಶಿನಾಥ, ಗುಡಿಹಳ್ಳಿ ಹಾಲೇಶ, ಕಬ್ಬಳ್ಳಿ ಮೈಲಪ್ಪ, ಮೋತಿನಾಯ್ಕ, ಮತ್ತೂರು ಬಸವರಾಜ, ಎಲ್‌.ಮಂಜನಾಯ್ಕ, ಎನ್‌.ಶಂಕರ, ಸಾಸಿವಿಹಳ್ಳಿ ನಾಗರಾಜ ಇತರರು ಹಾಜರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ