ವಿಂಡ್ ಪ್ಯಾನ್ ದುರಂತ: ರೈತರಲ್ಲಿ ಆತಂಕ

KannadaprabhaNewsNetwork |  
Published : May 17, 2026, 02:00 AM IST
೧೬ ವೈಎಲ್‌ಬಿ ೦೧ಯಲಬುರ್ಗಾ ತಾಲೂಕಿನ ತಿಪ್ಪನಾಳ ಗ್ರಾಮದ ರೈತರ ಜಮೀನಿಲ್ಲಿ ಅಳವಡಿಸಲಾಗಿದ್ದ ವಿಂಡ್ ಪವರ್ ಪ್ಯಾನ್ ಕಂಬ ನೆಲ್ಲಕ್ಕೆ ಉರುಳಿ ಬಿದ್ದಿರುವುದು. | Kannada Prabha

ಸಾರಾಂಶ

ಘಟನೆಯಿಂದ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಯಲಬುರ್ಗಾ: ತಾಲೂಕಿನ ತಿಪ್ಪನಾಳ ಗ್ರಾಮದ ರೈತರ ಜಮೀನಲ್ಲಿ ಅಳವಡಿಸಲಾಗಿದ್ದ ಪವನ ವಿದ್ಯುತ್ ಫ್ಯಾನ್ ಇದ್ದಕ್ಕಿದ್ದಂತೆ ನೆಲಕ್ಕೆ ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದಿದೆ.

ಸುಜಲೋನ್ ಕಂಪನಿಯವರು ರೈತ ಕಾಮಣ್ಣ ಹೊಸಮನಿ ಅವರ ಜಮೀನಲ್ಲಿ ಅಳವಡಿಸಲಾಗಿದ್ದ ಬೃಹತ್ ಗಾತ್ರದ ವಿಂಡ್ ಪ್ಯಾನ್ ಇದ್ದಕ್ಕಿದ್ದಂತೆ ನೆಲಕ್ಕುರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಒಂದು ಘಟನೆಯಿಂದ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನಿಯು ಸುರಕ್ಷತಾ ಕ್ರಮ ಸಂಪೂರ್ಣವಾಗಿ ನಿರ್ಲಕ್ಷಿಸಿದ ಕಾರಣ ಈ ದುರಂತ ಸಂಭವಿಸಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಆಗ್ರಹ: ಅಲ್ಲದೆ ತಾಲೂಕಿನ ಹಿರೇವಂಕಲಕುಂಟಾ ಹೋಬಳಿಯ ಗುನ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಯಮಾವಳಿ ಗಾಳಿಗೆ ತೂರಿ ಬೃಹತ್ ಗಾತ್ರದ ಯಂತ್ರೋಪಕರಣ ಸಂಗ್ರಹಿಸುತ್ತಿರುವ ಖಾಸಗಿ ಕಂಪನಿಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಕೆಯಾಗಿ ತಿಂಗಳು ಕಳೆದರೂ ಯಾವುದೇ ಕಾನೂನು ಕ್ರಮ ಜರುಗಿಸದಿರುವುದು ವಿಪರ್ಯಾಸ. ಅನಧಿಕೃತವಾಗಿ ಯಂತ್ರೋಪಕರಣ ಸಂಗ್ರಹಿಸಿ, ಕಂದಾಯ ವಂಚಿಸುತ್ತಿರುವ ಕಂಪನಿಯ ವಿರುದ್ಧ ತಾಲೂಕಾಡಳಿತ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಸಂತೋಷ ತೋಟದ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆ, ಬಿರುಗಾಳಿಗೆ ನೂರಾರು ಎಕರೆ ಬಾಳೆ ನೆಲಕ್ಕೆ
ಕೊಪ್ಪಳದ ಪ್ರಜ್ಞಾವಂತರು ಮಾಲಿನ್ಯದ ವಿರುದ್ಧ ಬೀದಿಗಿಳಿಯಲಿ