ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಎಂಪ್ರೆಸ್ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಏರ್ಪಡಿಸಲಾಗಿದ್ದ ಸಂವಿಧಾನ ರಚನಾ ಸಮಿತಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯ, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಸಂವಿಧಾನ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಸಂವಿಧಾನದ ಮಹತ್ವ, ಆಶಯ ಮತ್ತು ಸಮಾನತೆ, ತತ್ವಗಳ ಬಗ್ಗೆ ಸಮಾಜದ ಸರ್ವರಿಗೂ ಅರಿವು ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಜಾಯಿತಿಗಳಿಗೆ ಬೃಹತ್ ಸಂವಿಧಾನದ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದೇ ರೀತಿ ತುಮಕೂರು ಜಿಲ್ಲೆಯಲ್ಲಿ ಜನವರಿ 26 ರಂದು ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಗಿದ್ದು, ಈ ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯ ಎಲ್ಲಾ 330 ಗ್ರಾಮ ಪಂಜಾಯಿತಿಗಳಿಗೆ ಸಂಚರಿಸಿ ನಾಗರಿಕರಿಗೆ ಮತ್ತು ಸಮಾಜದ ಸರ್ವರಿಗೂ ಸಂವಿಧಾನದ ಮಹತ್ವವನ್ನು ತಿಳಿಸಲಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಮಾತನಾಡಿ, ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಬಹಳ ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳಬೇಕು, ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಏನ್ನಾದರೂ ಸಾಧಿಸಬೇಕು ಎನ್ನುವ ಛಲವಿದ್ದಾಗ ಮಾತ್ರ ಗುರಿ ತಲುಪಲು ಸಾಧ್ಯ. ಶಿಕ್ಷಕರು ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಭದ್ರಬುನಾದಿ ಹಾಕಬೇಕು. ಆಗ ಮಾತ್ರ ಮಕ್ಕಳು ಕ್ರಿಯಾಶೀಲರಾಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಜಿಲ್ಲಾ ವಾರ್ತಾಧಿಕಾರಿ ಮಮತಾ ಎಂ.ಆರ್., ತಹಸೀಲ್ದಾರ್ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ ಮತ್ತಿತರರಿದ್ದರು.