ಕುಷ್ಟಗಿ:
ಪಟ್ಟಣದ ದೋಟಿಹಾಳ ರಸ್ತೆಯಲ್ಲಿರುವ ಸಂತೋಷ ಪಟ್ಟಣಶೆಟ್ಟರ ಸಾಮಿಲ್ ಹತ್ತಿರದ ಜಮೀನಿನಲ್ಲಿ ನಡೆದ ಕೋಟಿ ಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜಾ ಹಾಗೂ ಅಡಿಗಲ್ಲು ಸಮಾರಂಭದ ವೇದಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇವಸ್ಥಾನ ನಿರ್ಮಾಣದ ಕನಸು ಆದಷ್ಟು ಬೇಗನೆ ಈಡೇರಲಿ. ಕುಷ್ಟಗಿ ಸುಕ್ಷೇತ್ರವಾಗಿ ನಿರ್ಮಾಣವಾಗಲಿ ಎಂದು ಹಾರೈಸಿದರು. ಈ ಮಹತ್ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.ದುರ್ಗಾಪರಮೇಶ್ವರಿ ಆಶ್ರಮದ ಸದಾನಂದ ಮಹಾರಾಜರು ಮಾತನಾಡಿ, ಲೋಕ ಕಲ್ಯಾಣಾರ್ಥವಾಗಿ ಈ ಕೋಟಿಲಿಂಗೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ಇಲ್ಲಿ ಅನಾಥ, ಅಂಧ ಮಕ್ಕಳಿಗೆ ಆಶ್ರಯ, ಹಸಿದ ಹೊಟ್ಟೆಗೆ ಆಹಾರ ನೀಡುವ ಮೂಲಕ ಸಾಮಾಜಿಕ ಸೇವೆಗೆ ಮುಂದಾಗುತ್ತೇವೆ. ಈ ದೇವಸ್ಥಾನದ ನಿರ್ಮಾಣಕ್ಕೆ ಭಕ್ತರ ಸಹಾಯ, ಸಹಕಾರ ಅವಶ್ಯಕತೆ ಇದ್ದು ಸಹಕರಿಸಬೇಕು. ಈ ದೇವಸ್ಥಾನವೂ ಮುಂದೊಂದು ದಿನ ಜಾಗೃತ ಸ್ಥಳವಾಗಲಿದೆ ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯರು, ಕುಷ್ಟಗಿ ಕರಿಬಸವ ಶಿವಾಚಾರ್ಯರು, ನಿಡಶೇಸಿ ಅಭಿನವ ಕರಿಬಸವಶಿವಾಚಾರ್ಯರು ಸೇರಿದಂತೆ ಅನೇಕ ಶ್ರೀಗಳು ಇದ್ದರು. ದೇವಸ್ಥಾನ ಸಮಿತಿಯ ಪ್ರಮುಖರಾದ ಸಂತೋಷ ಪಟ್ಟಣಶೆಟ್ಟರ, ಮುತ್ತಣ್ಣ ಪಟ್ಟಣಶೆಟ್ಟರ, ಬಾಲಚಂದ್ರಪ್ಪ ಹಿರೆಮನ್ನಾಪೂರ, ಬಸನಗೌಡ ಪಾಟೀಲ್, ಮಲ್ಲಿಕಾರ್ಜುನ ಸೇರಿದಂತೆ ಸಾಕೇಶ್ವರ ಟ್ರಸ್ಟ್ ಪದಾಧಿಕಾರಿಗಳು ನೂರಾರು ಜನ ಭಕ್ತರು ಭಾಗವಹಿಸಿದ್ದರು.