- ಸಿಎಂ ಸಿದ್ದರಾಮಯ್ಯಗೆ ಕೋಡಿಹಳ್ಳಿ ರೈತನಾಯಕ ಚಂದ್ರಶೇಖರ್ ತಾಕೀತು ।
- - -
ಕನ್ನಡಪ್ರಭ ವಾರ್ತೆ ದಾವಣಗೆರೆಹಸಿಹಸಿ ಸುಳ್ಳುಗಳನ್ನು ಹೇಳುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಮಾರಕವಾಗಿದೆ. ರಾಜ್ಯದ ಕಾಯ್ದೆಗಳು ರೈತರಿಗೆ ವಿರುದ್ಧವಾಗಿವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಕಿಡಿಕಾರಿದರು.
ಆವರ್ತ ನಿಧಿ ಸೃಜಿಸಿ:
ನೆರೆಯ ಪಾಕಿಸ್ತಾನದ ಜೊತೆ ಯುದ್ಧ ಆರಂಭವಾದಾಗ ಭಾರತ ಟೊಮ್ಯಾಟೋ ರಫ್ತು ನಿಷೇಧಿಸಿತು. ಈಗ ರೈತರು ನಷ್ಟ ಅನುಭವಿಸಿ, ಟೊಮ್ಯಾಟೋ ಹಣ್ಣುಗಳನ್ನು ರಸ್ತೆಗೆ ಚೆಲ್ಲಿ ಪ್ರತಿಭಟಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ರೈತರ ನೆರವಿಗೆ ಧಾವಿಸಬೇಕು. ರಾಜ್ಯ ಸರ್ಕಾರವೂ ಸಹಕಾರ ನೀಡಬೇಕು. ಟೈನ್ ದಾರ ಆಮದು ಆಗದ್ದರಿಂದ ಅದರ ಬೆಲೆ ದುಪ್ಪಟ್ಟಾಗಿದೆ. ಈ ಬಗ್ಗೆಯೂ ಕೇಂದ್ರ, ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಲಿ ಎಂದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿ ಇರಲಾರದು ಎಂದು ಭವಿಷ್ಯ ನುಡಿದರು.
ಸಂಘದ ಮುಖಂಡರಾದ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಮಂಜುನಾಥ ಗೌಡ ಸೊರಬ, ಭಕ್ತರಹಳ್ಳಿ ಭೈರೇಗೌಡ, ಚಂದ್ರಶೇಖರ ಜಮಖಂಡಿ, ವೀರಭದ್ರ ಸ್ವಾಮಿ, ಮಲ್ಲನಗೌಡ ಪಾಟೀಲ ಕಲ್ಬುರ್ಗಿ, ಮಹಾದೇವಿ ಬೇನಾಳ ಮಠ, ರಾಮೇಗೌಡ ಕೋಲಾರ, ವೀರನಗೌಡ ಪಾಟೀಲ ಇತರರು ಇದ್ದರು.
(ಕೋಟ್) ಲಕ್ಕವಳ್ಳಿಯ ಭದ್ರಾ ಜಲಾಶಯ ಬಲದಂಡೆ ನಾಲೆಯನ್ನು ಸೀಳಿ, ನೀರು ಪೂರೈಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕಾಲಮಿತಿ ನೀಡಲಾಗುವುದು. ಈ ಬಗ್ಗೆ ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಸಂಘದ ರಾಜ್ಯಮಟ್ಟದ ಸಭೆ ಕರೆಯಲಾಗಿದೆ. ಭದ್ರಾ ಅಚ್ಚುಕಟ್ಟು ರೈತರ ವಿಚಾರ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಿದ್ದೇವೆ.
- - -
ದಾವಣಗೆರೆಯಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.