ಕನ್ನಡಪ್ರಭ ವಾರ್ತೆ ಮಂಡ್ಯ/ಮಳವಳ್ಳಿ
ತಾಲೂಕಿನ ಬ್ಲಪ್ನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ನಡೆದ ಗಗನಚುಕ್ಕಿ ಜಲಪಾತೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮೇಕೆದಾಟು ಅಣೆಕಟ್ಟು ಯೋಜನೆಯಿಂದ 66 ಟಿಎಂಸಿಯಷ್ಟು ನೀರನ್ನು ಸಂಗ್ರಹ ಮಾಡಲು ಅವಕಾಶವಿದೆ. ಹೆಚ್ಚುವರಿ ನೀರು ಸಂಗ್ರಹಿಸಲು ಈ ಯೋಜನೆ ಅಗತ್ಯವಾಗಿದೆ. ತಮಿಳುನಾಡಿನವರು ರಾಜಕೀಯಕ್ಕಾಗಿ ಯೋಜನೆಗೆ ತಡೆಯೊಡ್ಡದೆ ಸಹಕಾರ ನೀಡಬೇಕು ಎಂದರು.
ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರನ್ನು ಮಾತ್ರ ನೀಡಬೇಕು. ಈ ವರ್ಷ ಸೆಪ್ಟಂಬರ್ವರೆಗೆ 98 ಟಿಎಂಸಿಯಷ್ಟು ಮಾತ್ರ ನೀರನ್ನು ಕೊಡಬೇಕಾಗಿತ್ತು. ಆದರೆ, 221 ಟಿಎಂಸಿ ನೀರು ಹರಿದುಹೋಗಿದೆ. ಹೆಚ್ಚುವರಿಯಾಗಿ 122 ಟಿಎಂಸಿ ನೀರು ಹರಿದುಹೋಗಿದೆ ಎಂದರು.ಈ ಬಾರಿ ರಾಜ್ಯದ ಎಲ್ಲಾ ಜಲಾಶಗಳು ಭರ್ತಿಯಾಗಿವೆ. ಉತ್ತಮ ಮಳೆಯಾದರೆ ನೀರು ಇಟ್ಟುಕೊಳ್ಳಲು ಆಗಲ್ಲ. ಹೆಚ್ಚುವರಿ ನೀರು ಬಿಟ್ಟಾಗಲೆಲ್ಲಾ ತಮಿಳುನಾಡಿನವರು ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದೆ ಸಮುದ್ರ ಪಾಲಾಗುತ್ತಿದೆ. ಅಣೆಕಟ್ಟೆ ನಿರ್ಮಾಣವಾದರೆ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಮಳೆ ಕಡಿಮೆ ಇರುವ ದಿನಗಳಲ್ಲಿ ಬಳಕೆ ಮಾಡಿಕೊಳ್ಳಲು, ನೀವು ಕೇಳಿದಾಗ ನೀರು ಬಿಡಲು ಅನುಕೂಲವಾಗಲಿದೆ ಎಂದರು.
ಮೈಷುಗರ್ನಲ್ಲಿ ಬಾಯ್ಲಿಂಗ್ ಹೌಸ್ ನಿರ್ಮಾಣಕ್ಕೆ ಅನುಮತಿ ನೀಡಲು ನಾನು ಸಿದ್ಧನಿದ್ದೇನೆ. ಮೈಷುಗರ್ ಯಾವುದೇ ಕಾರಣಕ್ಕೂ ನಷ್ಟದಲ್ಲಿ ನಡೆಯಬಾರದು. ಕಾರ್ಖಾನೆ ನಷ್ಟದಲ್ಲಿ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಸಚಿವರು ಮತ್ತು ಕಾರ್ಖಾನೆಯ ಅಧ್ಯಕ್ಷರದ್ದಾಗಿದೆ ಎಂದರು.
ಸರ್ಕಾರದಿಂದ ಹಣ ಪಡೆಯುವುದಷ್ಟೇ ಮುಖ್ಯವಲ್ಲ. ಕೊಟ್ಟ ಹಣವನ್ನು ಸದ್ಬಳಕೆ ಮಾಡಿಕೊಂಡು ಕಾರ್ಖಾನೆ ನಷ್ಟವಿಲ್ಲದೆ ಲಾಭದಾಯಕವಾಗಿ ನಡೆಸಬೇಕು. ನಾನು ಅಧಿಕಾರದಲ್ಲಿರುವಾಗ ಕಾರ್ಖಾನೆಗೆ ಎಷ್ಟೇ ಹಣ ನೀಡಲು ಸಿದ್ಧನಿದ್ದೇನೆ. ಆದರೆ, ಮುಂದೆ ಅಧಿಕಾರಕ್ಕೆ ಬರುವವರು ಕಾರ್ಖಾನೆಗೆ ಹಣ ಕೊಡುತ್ತಾರೆಂಬುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದರು.