ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ: ಸ್ಥಳೀಯ ಯುವಕನಿಂದ ರಕ್ಷಣೆ

KannadaprabhaNewsNetwork |  
Published : Dec 13, 2024, 12:46 AM IST
ಪಾವಂಜೆ ಸೇತುವೆಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆಗೆ ಯತ್ನ,ಯುವಕನಿಂದ ಪಾರು | Kannada Prabha

ಸಾರಾಂಶ

ಪಾವಂಜೆಯ ಸೇತುವೆಯಲ್ಲಿ ಮಂಗಳೂರು ಕಡೆಗೆ ಹೋಗುವ ಸೇತುವೆಯಲ್ಲಿ ಮಹಿಳೆಯೊಬ್ಬ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದರು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪಾವಂಜೆ ನಿವಾಸಿ ಪ್ರವೀಣ್‌ ಗಮನಿಸಿ ತನ್ನ ಸ್ನೇಹಿತರಿಗೆ ವಿಷಯ ತಿಳಿಸಿ ಅವರ ಸಹಾಯದಿಂದ ಮಹಿಳೆಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.

ಮೂಲ್ಕಿ: ಮುಕ್ಕ ಸಮೀಪದ ಪಾವಂಜೆ ಸೇತುವೆಯಲ್ಲಿ ಮಹಿಳೆಯೊಬ್ಬರು ನದಿಗೆ ಹಾರಲು ಯತ್ನಿಸುತ್ತಿದ್ದು ಸ್ಥಳೀಯ ಯುವಕನೊಬ್ಬನ ಸಮಯಪ್ರಜ್ಞೆಯಿಂದ ರಕ್ಷಿಸಲ್ಪಟ್ಟಿರುವ ಘಟನೆ ನಡೆದಿದೆ. ಪಾವಂಜೆಯ ಸೇತುವೆಯಲ್ಲಿ ಮಂಗಳೂರು ಕಡೆಗೆ ಹೋಗುವ ಸೇತುವೆಯಲ್ಲಿ ಮಹಿಳೆಯೊಬ್ಬ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದರು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪಾವಂಜೆ ನಿವಾಸಿ ಪ್ರವೀಣ್‌ ಗಮನಿಸಿ ತನ್ನ ಸ್ನೇಹಿತರಿಗೆ ವಿಷಯ ತಿಳಿಸಿ ಅವರ ಸಹಾಯದಿಂದ ಮಹಿಳೆಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ. ಮಹಿಳೆ ಕೃಷ್ಣಾಪುರ ನಿವಾಸಿಯಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂದರ್ಭ ಸ್ವಲ್ಪಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಟ್ರಾಫಿಕ್‌ ಜಾಮ್‌ ಆಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರ ಸುಗಮಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ