ಬಾವಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಶಂಕೆ

KannadaprabhaNewsNetwork |  
Published : Sep 27, 2024, 01:17 AM IST
ಕ್ರೈಂ | Kannada Prabha

ಸಾರಾಂಶ

ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಗುರುವಾರ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಗುರುವಾರ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆದರೆ, ಗ್ರಾಮದ ದೇವಸ್ಥಾನವೊಂದಕ್ಕೆ ಕಳ್ಳತನಕ್ಕೆ ಬಂದಿದ್ದವರು ಈ ದುಷ್ಕೃತ್ಯ ಎಸಗಿದರೆ ಎಂಬ ಅನುಮಾನ ಕೂಡ ಈಗ ಎಲ್ಲರನ್ನು ಕಾಡುತ್ತಿದೆ.

ಶಿಂಧೋಳಿ ಗ್ರಾಮದ ಭಾರತಿ ಪೂಜಾರಿ ( 48) ಮೃತಪಟ್ಟ ಮಹಿಳೆ. ಶಿಂಧೋಳಿ ಗ್ರಾಮದ ಮಸಣವ್ವ ದೇವಸ್ಥಾನಕ್ಕೆ ಕಳ್ಳರು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ತನ್ನ ಮನೆಯ ದನಕರುಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಬಂದಿದ್ದ ಈ ಮಹಿಳೆ ಕಳ್ಳರನ್ನು ನೋಡಿದ್ದಾಳೆ. ಆಗ ದುಷ್ಕರ್ಮಿಗಳು ನಮ್ಮ ಕೃತ್ಯಬಯಲಾಗುತ್ತದೆ ಎಂದು ಮಹಿಳೆಯನ್ನು ಹೊತ್ತೊಯ್ದು ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಳ್ಳರು ದೇವಸ್ಥಾನದಲ್ಲಿನ ಬೆಳ್ಳಿಯ ಆಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗ್ಗೆಯಿಂದ ಮನೆಯಲ್ಲಿ ಕಾಣದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಭಾರತಿ ಅವರನ್ನು ಹುಡುಕಾಟ ನಡೆಸಿದ್ದಾರೆ. ಆದರೆ, ಎಲ್ಲಿಯೂ ಸಿಗದ್ದರಿಂದ ಆತಂಕಗೊಂಡ ಅವರಿಗೆ ಬಾವಿ ಬಳಿ ಭಾರತಿ ಚಪ್ಪಲಿ ಕಂಡಿವೆ ಎಂದು ಹೇಳಲಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ತಪಾಸಣೆ ಮಾಡಿದಾಗ ಬಾವಿಯಲ್ಲಿ ಭಾರತಿ ಅವರ ಶವ ಪತ್ತೆಯಾಗಿದೆ. ಮಸಣವ್ವ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದಕ್ಕೂ ಮತ್ತು ಬಾವಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವುದಕ್ಕೂ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಠಾರೋತ್ಸವ: ಚೆಲುವನಾರಾಯಣಸ್ವಾಮಿಗೆ ಪುಷ್ಪಾಲಂಕಾರ ಸೇವೆ
ಹಿಪ್ಪು ನೇರಳೆ ಮತ್ತು ರೇಷ್ಮೆ ಲಾಭದಾಯಕ ಬೆಳೆಗಳು