ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮರ್ಮಾಂಗಕ್ಕೆ ಒದ್ದು ಹತ್ಯೆ

KannadaprabhaNewsNetwork |  
Published : May 04, 2026, 01:30 AM ISTUpdated : May 04, 2026, 12:55 PM IST
Crime

ಸಾರಾಂಶ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಹಿನ್ನೆಲೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯ ಮರ್ಮಾಂಗಕ್ಕೆ ಒದ್ದು ಕೊಲೆಗೈದ ಘಟನೆ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.ರಮ್ಯಾ.ಎ.ಆರ್. (35) ಮೃತ ಮಹಿಳೆಯಾಗಿದ್ದು, ಚಂದ್ರ (41) ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

  ಸಕಲೇಶಪುರ :  ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಹಿನ್ನೆಲೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯ ಮರ್ಮಾಂಗಕ್ಕೆ ಒದ್ದು ಕೊಲೆಗೈದ ಘಟನೆ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಮ್ಯಾ.ಎ.ಆರ್. (35) ಮೃತ ಮಹಿಳೆಯಾಗಿದ್ದು, ಚಂದ್ರ (41) ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ನಡೆದಿದ್ದೇನು?:

ರಮ್ಯಾ ಅವರ ಪತಿ ಉಮೇಶ್ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ನಂತರ ರಮ್ಯಾ ಅದೇ ಗ್ರಾಮದ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರೆಂದು ತಿಳಿದುಬಂದಿದೆ. ರಮ್ಯಾ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಮನೆಯೊಂದರಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು.

ಏಪ್ರಿಲ್ 28ರಂದು ರಮ್ಯಾ ಅವರ ಅತ್ತೆ ಕಾಳಮ್ಮ ನಿಧನರಾದ ಹಿನ್ನೆಲೆಯಲ್ಲಿ, ಅವರು ಬೆಂಗಳೂರಿನಿಂದ ಅತ್ತಿಹಳ್ಳಿ ಗ್ರಾಮಕ್ಕೆ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಆರೋಪಿಯಾದ ಚಂದ್ರ ಮನೆಗೆ ಬಂದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ.

ಇದಕ್ಕೆ ರಮ್ಯಾ ವಿರೋಧ ವ್ಯಕ್ತಪಡಿಸಿದ್ದರಿಂದ ಸಿಟ್ಟಿಗೆದ್ದ ಚಂದ್ರ, ಆಕೆಯ ಮೇಲೆ ಹಲ್ಲೆ ನಡೆಸಿ ಮರ್ಮಾಂಗಕ್ಕೆ ಕಾಲಿನಿಂದ ಒದ್ದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಘಟನೆಯ ನಂತರ ಏಪ್ರಿಲ್ 30 ರಂದು ರಮ್ಯಾ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಂದ್ರನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಎರಡೂವರೆ ವರ್ಷದ ಬಾಲಕನ ಅಪರೂಪದ ಸಾಧನೆ!
ಬಿಎಲ್ಡಿಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ