ಮೋದಿ ಸಾಲ ಹೆಸರಲ್ಲಿ ಮಹಿಳೆಯರಿಗೆ ವಂಚನೆ: ಪ್ರತಿಭಟನೆ

KannadaprabhaNewsNetwork |  
Published : Jun 11, 2025, 11:49 AM IST
10 ಜೆ.ಜಿ.ಎಲ್.1) ಜಗಳೂರು ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವ ಸಹಾಯ ಸಂಘದ ಸದಸ್ಯರಿಗೆ ವಂಚನೆ ಮಾಡಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ ಎಸ್ )ಪಕ್ಷದ ಕಾರ್ಯಕರ್ತರು ಸ್ವ ಸಹಾಯ ಸಂಘದ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. | Kannada Prabha

ಸಾರಾಂಶ

ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಸಂಘದ ಸದಸ್ಯರೊಂದಿಗೆ ಪ್ರತಿಭಟಿಸಿದ್ದಾರೆ.

- ಲಕ್ಷಾಂತರ ಹಣ ವಂಚಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ । ಕೆಆರ್‌ಎಸ್‌ ಪಕ್ಷ ಸಾಥ್‌

- - - ಕನ್ನಡಪ್ರಭ ವಾರ್ತೆ ಜಗಳೂರು

ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಸಂಘದ ಸದಸ್ಯರೊಂದಿಗೆ ಪ್ರತಿಭಟಿಸಿದರು.

ಶೆಟ್ಟಿಗೊಂಡನಹಳ್ಳಿ ಗ್ರಾಮದ ರೇಣುಕಾದೇವಿ ಮಹಿಳಾ ಸ್ವಸಹಾಯ ಸಂಘ, ಹಳ್ಳಿ ಚೌಡಮ್ಮ, ಪಾಂಡುರಂಗ ಸ್ವಾಮಿ ಸಂಘ, ಮಾರುತಿ ಸಂಘ, ದುರ್ಗಾಂಬ ಸಂಘ, ಆಂಜನೇಯ ಸಂಘದ 60 ಹೆಚ್ಚು ಮಹಿಳೆಯರಿಗೆ ಸಾಲ ಕೊಡಿಸುವುದಾಗಿ ರಂಜಿತ, ವಿಶಾಲಮ್ಮ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ವೀರಭದ್ರಪ್ಪ ಮಾತನಾಡಿ, ಈ ಗುಂಪು ಕೂಲಿ ಮಾಡಿ ಜೀವನ ನಡೆಸುವ ಹಳ್ಳಿ ಹೆಣ್ಣುಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಣ್ಣುಮಕ್ಕಳಿಗೆ ಸಹಾಯಧನ ರೂಪದಲ್ಲಿ ₹5 ಲಕ್ಷವರೆಗೂ ಸಾಲ ನೀಡುತ್ತದೆ, ಅಗತ್ಯ ದಾಖಲೆಗಳನ್ನು ಒದಗಿಸಿ ಎಂದು ಭರವಸೆ ನೀಡಿದ್ದರು. ಅನಂತರ ಕಚೇರಿ ಖರ್ಚು, ಅಧಿಕಾರಿಗಳು ಇಂತಿಷ್ಟು ಎಂದು ಹೇಳಿ ಒಬ್ಬರಿಂದ ₹12 ಸಾವಿರದಂತೆ 60 ಜನರಿಂದ ಹಣ ಪಡೆದಿದ್ದಾರೆ. ಅಲ್ಲದೇ ₹20 ಲಕ್ಷ ಬೇಕಾದವರು ₹3 ಲಕ್ಷ ಕೊಡಬೇಕು ಎಂದು ವಸೂಲಿ ಮಾಡಿದ್ದಾರೆ. ಆದರೆ ಅಮಾಯಕ ಹೆಣ್ಣುಮಕ್ಕಳು ಮನೆಗಳಲ್ಲಿ ಯಾರಿಗೂ ಹೇಳದೇ ಹಣ ಕೊಟ್ಟು ಕಳೆದುಕೊಂಡು ಈಗ ಬೀದಿಗೆ ಬಿದ್ದಿದ್ದಾರೆ. ಇಂತಹ ವಂಚನೆ ಮಾಡುವವರಿಗೆ ಕಾನೂನು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಗೌರಿಪುರ ರೇಣುಕಮ್ಮ ಮಾತನಾಡಿ, ಹಳ್ಳಿಗಳಲ್ಲಿ ಸಂಘಗಳನ್ನು ಪ್ರಾರಂಭಿಸಿ ಮಹಿಳಾ ಸದಸ್ಯರಿಂದ ಹಣ ಸಂಗ್ರಹಿಸಿಕೊಡು ಸಾಲ ಸೌಲಭ್ಯ ಕೊಡಿಸುವುದಾಗಿ ನಂಬಿಸಿ ನನ್ನಿಂದ ಹಣ ಹಾಕಿಸಿಕೊಂಡು ಈಗ ನನಗೆ ತಿರುಗಿಬಿದ್ದಿದ್ದಾರೆ. ಹಣ ವಾಪಸ್‌ ಕೇಳಿದರೆ ಕೊಡುವುದಿಲ್ಲ, ಏನಾದರೂ ಮಾಡಿಕೊಳ್ಳಿ ಎಂದು ಬೆದರಿಕೆ ಹಾಕುತ್ತಾರೆ. ನನಗೆ ಮತ್ತು ಸಂಘದ ಸದಸ್ಯರಿಗೆ ತುಂಬ ಅನ್ಯಾಯ ಮಾಡಿದ್ದಾರೆ. ವಂಚಕಿಯರನ್ನು ಬಂಧಿಸಿ ಹಣ ವಾಪಸ್‌ ಕೊಡಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಪಕ್ಷದ ಗೌರವಾಧ್ಯಕ್ಷ ಮಂಜುನಾಥ್ ಹಳ್ಳಿಕೇರಿ, ಜಿಲ್ಲಾಧ್ಯಕ್ಷ ಬಸವರಾಜಯ್ಯ, ತಾಲೂಕು ಅಧ್ಯಕ್ಷ ಸ್ವಾಮಿ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟನಾಯ್ಕ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಹಮತ್, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್, ಎಸ್ಸಿ,ಎಸ್ಟಿ ಘಟಕ ಅಧ್ಯಕ್ಷ ಹನುಮಂತ್ಪ, ಪ್ರಕಾಶ್ ನಾಯ್ಕ, ಮಹಾಂತೇಶ್ ನಾಯ್ಕ, ಇಮಾಂ ಸಾಬ್ ಮತ್ತಿತರರಿದ್ದರು.

- - -

-10ಜೆಜಿಎಲ್1:

ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಜಗಳೂರು ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಸಂಘಟನೆಗಳ ಸದಸ್ಯರು ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ ಪ್ರತಿಭಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''